ಬ್ರೇಕಿಂಗ್ ನ್ಯೂಸ್
28-02-26 10:54 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ – ಇಸ್ರೇಲ್ – ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ದುಬೈನತ್ತಲೂ ಮಿಸೈಲ್ ದಾಳಿ ಆಗುತ್ತಿರುವುದರಿಂದ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಎಲ್ಲ ಜನರು ತೆರವಾಗುವಂತೆ ಸೂಚಿಸಲಾಗಿದೆ.
ಇರಾನ್ ಪಡೆಗಳು ಅಲ್ ದಫ್ರಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ಅಬುಧಾಬಿ ಮತ್ತು ದುಬೈನಲ್ಲೂ ಸ್ಫೋಟದ ಘಟನೆಗಳು ನಡೆದಿವೆ. ದುಬೈನ ಬುರ್ಜ್ ಖಲೀಫಾ ಕಟ್ಟಡದ ಬಳಿಯಲ್ಲೂ ಸ್ಫೋಟದ ಸದ್ದು ಕೇಳಿದ್ದು ಜನರು ಆತಂಕಗೊಂಡಿದ್ದಾರೆ. ದುಬೈನಲ್ಲಿ ಕೇರಳ, ಕರ್ನಾಟಕದ ಅತಿ ಹೆಚ್ಚು ಜನರಿದ್ದಾರೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಸ್ಫೋಟದ ಸದ್ದು ಕೇಳಿದ್ದು ಹೊಗೆ ಎದ್ದಿರುವ ದೃಶ್ಯವನ್ನು ಸಿಎನ್ಎನ್ ಟಿವಿ ವರದಿ ಮಾಡಿದೆ.
ಅಬುಧಾಬಿಯ ವಸತಿ ಪ್ರದೇಶಕ್ಕೂ ಇರಾನ್ ಕ್ಷಿಪಣಿ ದಾಳಿಯಾಗಿದ್ದರಿಂದ ಅಲ್ಲಿನ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ನಂತರ, ದುಬೈನಲ್ಲಿ ವಿಮಾನ ಸಂಚಾರ ರದ್ದುಪಡಿಸಿದ್ದು ಏರ್ ಡಿಫೆನ್ಸ್ ಸಿಸ್ಟಮ್ ಸಿದ್ಧವಾಗಿಸಲಾಗಿದೆ. ಇರಾನ್ ದಾಳಿಯನ್ನು ಯುಎಇ ಸಚಿವಾಲಯ, ಹೇಡಿತನದ್ದು ಮತ್ತು ಅಪಾಯಕಾರಿ ನಡೆ ಎಂದು ಹೇಳಿದೆ. ದುಬೈ ಬಳಿಯ ಪ್ರಸಿದ್ಧ ಪ್ರವಾಸಿ ತಾಣ ಪಾಮ್ ಐಲ್ಯಾಂಡ್ ಬಳಿಯೂ ಬೆಂಕಿ ಮತ್ತು ಹೊಗೆ ಎದ್ದಿದ್ದು ಕ್ಷಿಪಣಿ ದಾಳಿಯಾದ ಬಗ್ಗೆ ಹೇಳಲಾಗುತ್ತಿದೆ.
ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿಯು ಇರಾನ್ ನಾಯಕ ಅಲಿ ಖಮೇನಿ ಮತ್ತು ಅಧ್ಯಕ್ಷ ಮಸೂದ್ ಪಜೆಶ್ಕಿಯಾನ್ ಅವರನ್ನು ಗುರಿಯಾಗಿಸಿದ್ದು ಇರಾನ್ ದೇಶದ ಉತ್ತರ ದಕ್ಷಿಣವೆಂದು ಎಲ್ಲ ಕಡೆಯೂ ದಾಳಿಯಾಗಿದೆ. ಬಾಲಕಿಯರ ಶಾಲೆಗೂ ಬಾಂಬ್ ದಾಳಿಯಾಗಿದ್ದು, ಅಲ್ಲಿ 57 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಒಟ್ಟು 85 ಮಂದಿ ಇರಾನ್ ಕಡೆಯಲ್ಲಿ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಶನಿವಾರದ ಇಸ್ರೇಲ್ ದಾಳಿಯಿಂದ ಅಲಿ ಖಮೇನಿ ಸಾವಾಗಿದೆ ಎಂದು ಹೇಳಲಾಗುತ್ತಿದ್ದರೂ ಇರಾನ್ ಇದನ್ನು ದೃಢಪಡಿಸಿಲ್ಲ. ಇರಾನ್ ವಿದೇಶ ಮಂತ್ರಿ ಅಬ್ಬಾಸ್ ಅರಾಗ್ಚಿ, ಖಮೇನಿ ಇನ್ನೂ ಜೀವಂತ ಇದ್ದಾರೆ ಎಂದಿದ್ದಾರೆ. ಇರಾನ್ ಮೇಲಿನ ದಾಳಿಯನ್ನು ರಷ್ಯಾ ಮತ್ತು ಚೀನಾ ಖಂಡಿಸಿವೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm