ಬ್ರೇಕಿಂಗ್ ನ್ಯೂಸ್
28-02-26 10:54 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ – ಇಸ್ರೇಲ್ – ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ದುಬೈನತ್ತಲೂ ಮಿಸೈಲ್ ದಾಳಿ ಆಗುತ್ತಿರುವುದರಿಂದ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಎಲ್ಲ ಜನರು ತೆರವಾಗುವಂತೆ ಸೂಚಿಸಲಾಗಿದೆ.
ಇರಾನ್ ಪಡೆಗಳು ಅಲ್ ದಫ್ರಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ಅಬುಧಾಬಿ ಮತ್ತು ದುಬೈನಲ್ಲೂ ಸ್ಫೋಟದ ಘಟನೆಗಳು ನಡೆದಿವೆ. ದುಬೈನ ಬುರ್ಜ್ ಖಲೀಫಾ ಕಟ್ಟಡದ ಬಳಿಯಲ್ಲೂ ಸ್ಫೋಟದ ಸದ್ದು ಕೇಳಿದ್ದು ಜನರು ಆತಂಕಗೊಂಡಿದ್ದಾರೆ. ದುಬೈನಲ್ಲಿ ಕೇರಳ, ಕರ್ನಾಟಕದ ಅತಿ ಹೆಚ್ಚು ಜನರಿದ್ದಾರೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಸ್ಫೋಟದ ಸದ್ದು ಕೇಳಿದ್ದು ಹೊಗೆ ಎದ್ದಿರುವ ದೃಶ್ಯವನ್ನು ಸಿಎನ್ಎನ್ ಟಿವಿ ವರದಿ ಮಾಡಿದೆ.
ಅಬುಧಾಬಿಯ ವಸತಿ ಪ್ರದೇಶಕ್ಕೂ ಇರಾನ್ ಕ್ಷಿಪಣಿ ದಾಳಿಯಾಗಿದ್ದರಿಂದ ಅಲ್ಲಿನ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ನಂತರ, ದುಬೈನಲ್ಲಿ ವಿಮಾನ ಸಂಚಾರ ರದ್ದುಪಡಿಸಿದ್ದು ಏರ್ ಡಿಫೆನ್ಸ್ ಸಿಸ್ಟಮ್ ಸಿದ್ಧವಾಗಿಸಲಾಗಿದೆ. ಇರಾನ್ ದಾಳಿಯನ್ನು ಯುಎಇ ಸಚಿವಾಲಯ, ಹೇಡಿತನದ್ದು ಮತ್ತು ಅಪಾಯಕಾರಿ ನಡೆ ಎಂದು ಹೇಳಿದೆ. ದುಬೈ ಬಳಿಯ ಪ್ರಸಿದ್ಧ ಪ್ರವಾಸಿ ತಾಣ ಪಾಮ್ ಐಲ್ಯಾಂಡ್ ಬಳಿಯೂ ಬೆಂಕಿ ಮತ್ತು ಹೊಗೆ ಎದ್ದಿದ್ದು ಕ್ಷಿಪಣಿ ದಾಳಿಯಾದ ಬಗ್ಗೆ ಹೇಳಲಾಗುತ್ತಿದೆ.
ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿಯು ಇರಾನ್ ನಾಯಕ ಅಲಿ ಖಮೇನಿ ಮತ್ತು ಅಧ್ಯಕ್ಷ ಮಸೂದ್ ಪಜೆಶ್ಕಿಯಾನ್ ಅವರನ್ನು ಗುರಿಯಾಗಿಸಿದ್ದು ಇರಾನ್ ದೇಶದ ಉತ್ತರ ದಕ್ಷಿಣವೆಂದು ಎಲ್ಲ ಕಡೆಯೂ ದಾಳಿಯಾಗಿದೆ. ಬಾಲಕಿಯರ ಶಾಲೆಗೂ ಬಾಂಬ್ ದಾಳಿಯಾಗಿದ್ದು, ಅಲ್ಲಿ 57 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಒಟ್ಟು 85 ಮಂದಿ ಇರಾನ್ ಕಡೆಯಲ್ಲಿ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಶನಿವಾರದ ಇಸ್ರೇಲ್ ದಾಳಿಯಿಂದ ಅಲಿ ಖಮೇನಿ ಸಾವಾಗಿದೆ ಎಂದು ಹೇಳಲಾಗುತ್ತಿದ್ದರೂ ಇರಾನ್ ಇದನ್ನು ದೃಢಪಡಿಸಿಲ್ಲ. ಇರಾನ್ ವಿದೇಶ ಮಂತ್ರಿ ಅಬ್ಬಾಸ್ ಅರಾಗ್ಚಿ, ಖಮೇನಿ ಇನ್ನೂ ಜೀವಂತ ಇದ್ದಾರೆ ಎಂದಿದ್ದಾರೆ. ಇರಾನ್ ಮೇಲಿನ ದಾಳಿಯನ್ನು ರಷ್ಯಾ ಮತ್ತು ಚೀನಾ ಖಂಡಿಸಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm