ಬ್ರೇಕಿಂಗ್ ನ್ಯೂಸ್
02-03-26 03:10 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ನಾಯಕ ಅಯತೊಲ್ಲಾ ಅಲ್ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಶಿಯಾ ಮುಸ್ಲಿಮರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದು ಪ್ರತಿಭಟನೆಗೆ ನಿರ್ಬಂಧ ವಿಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 15 ಲಕ್ಷಕ್ಕೂ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ.
ಕಾಶ್ಮೀರದಲ್ಲಿ ಹಲವು ಕಡೆ ಪ್ರತಿಭಟನೆಗೆ ನಿರ್ಬಂಧ ಹೇಳಲಾಗಿದೆ. ಅಲ್ಲದೆ,ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಘಂಟಾ ಘರ್ ನಲ್ಲಿ ಪೊಲೀಸರು ರಸ್ತೆಗೆ ಅಲ್ಲಲ್ಲಿ ತಡೆಬೇಲಿ ಹಾಕಿದ್ದಾರೆ. ನಗರದಲ್ಲಿ ಪ್ರತಿಭಟನೆ ತಪ್ಪಿಸಲು ಪೊಲೀಸ್ ಮತ್ತು ಸಿಆರ್ ಪಿಎಫ್ ನಿಯೋಜಿಸಲಾಗಿದೆ. ಖಮೇನಿ ಹತ್ಯೆ ಬಳಿಕ ಕಾಶ್ಮೀರದ ಅನಂತನಾಗ್, ಬುದ್ಗಾಂವ್, ಸೈದಾ ಕಡಲ್, ಲಾಲ್ ಚೌಕ, ಬಂಡೀಪುರ್, ಪುಲ್ವಾಮಾದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದವು.

ಪ್ರತಿಭಟನೆಗಿಳಿದ ಜನರು ತಮ್ಮ ಎದೆಗೆ ಚಾಟಿಯಿಂದ ಹೊಡೆಯುತ್ತ ಇಸ್ರೇಲ್- ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೀಗ ಶಿಯಾ ಪ್ರಾಬಲ್ಯ ಇರುವಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಲಾಲ್ ಚೌಕ್ ನಗರವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ವೇಗಕ್ಕೆ ನಿಯಂತ್ರಣ ಹೇರಲಾಗಿದ್ದು ವೈರಲ್ ವಿಡಿಯೋಗಳಿಂದ ಜನರು ಉದ್ರೇಕಗೊಳ್ಳದಂತೆ ತಡೆಯುವ ಕೆಲಸ ಮಾಡಿದ್ದಾರೆ. ಶ್ರೀನಗರದಲ್ಲಿಯೂ ನಿರ್ಬಂಧ ಹೇರಲಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರು ಕಾಶ್ಮೀರಿ ಜನರಿಗೆ ತಮ್ಮ ಶೋಕಾಚರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಮುತಾಹಿದ್ ಮಜ್ಲಿಸ್ ಉಲಮಾ ಸಂಘಟನೆ, ಮೆಹಬೂಬ ಮುಫ್ತಿ ಅವರ ಪಿಡಿಪಿ ಮುಷ್ಕರಕ್ಕೆ ಕರೆಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm