ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm