ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm