ಬ್ರೇಕಿಂಗ್ ನ್ಯೂಸ್
03-03-26 04:11 pm HK News Staffer ದೇಶ - ವಿದೇಶ
ಮಾಸ್ಕೋ, ಮಾರ್ಚ್ 3: ಅಮೆರಿಕ ಮತ್ತು ಇಸ್ರೇಲ್ ಸೇನೆಗಳು ಇರಾನ್ ಮೇಲೆ ಯುದ್ಧ ಘೋಷಿಸಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಉದ್ವಿಗ್ನ ಸ್ಥಿತಿ ಜಾಗತಿಕ ವಿಮಾನಯಾನ ವ್ಯವಸ್ಥೆಯನ್ನೇ ಅಸ್ತವ್ಯಸ್ತಗೊಳಿಸಿದೆ. ಇದರ ಪರಿಣಾಮ ಲಕ್ಷಾಂತರ ಪ್ರಯಾಣಿಕರು, ಅದರಲ್ಲೂ ಅನೇಕ ಭಾರತೀಯರು ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ನಡುವೆ, ಮಾಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಭಾರತೀಯ ಇಂಜಿನಿಯರ್ ಒಬ್ಬರು “ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ” ಎಂದು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಹರಿದಾಡುತ್ತಿದೆ.
ಮುಂಬೈ ಮೂಲದ ಇಂಜಿನಿಯರ್ ಸುನಿಲ್ ಗುಪ್ತಾ ಎಂಬವರು ಮಾಸ್ಕೋದಲ್ಲಿ ತಾನು ಸಂಪೂರ್ಣ ಒಂಟಿಯಾಗಿದ್ದೇನೆ ಎಂದು ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ. ಅವರು ಇತಿಹಾದ್ ಏರ್ವೇಸ್ ಮತ್ತು ಮೇಕ್ ಮೈ ಟ್ರಿಪ್ ಸೇವೆಗಳನ್ನು ಟೀಕಿಸಿದ್ದು, ಮುನ್ಸೂಚನೆ ಇಲ್ಲದೆ ವಿಮಾನ ರದ್ದುಗೊಂಡ ಕಾರಣ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದು ಹೇಳಿದ್ದಾರೆ. “ರಷ್ಯಾದಲ್ಲಿ ವೀಸಾ ಅಥವಾ ಮಾಸ್ಟರ್ಕಾರ್ಡ್ ಸ್ವೀಕಾರವಾಗುತ್ತಿಲ್ಲ. ಊಟ, ನೀರಿಗೆ ಹಣವೂ ಇಲ್ಲ. ನಾನು ಇಲ್ಲಿ ಭಿಕ್ಷುಕನಂತೆ ನಿಂತಿದ್ದೇನೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮಾಡಿದ್ದು, ಇದರಿಂದ ಹಲವು ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ಮುಚ್ಚಿವೆ. ಹೀಗಾಗಿ ಸಾವಿರಾರು ವಿಮಾನಗಳು ರದ್ದಾಗಿದ್ದು, ಜಾಗತಿಕ ಪ್ರಯಾಣ ವ್ಯವಸ್ಥೆ ಅಸ್ಥಿರವಾಗಿದೆ. ಸುನಿಲ್ ಗುಪ್ತಾ ಅವರು ವಿಮಾನಯಾನ ಸಂಸ್ಥೆ ಮತ್ತು ಬುಕ್ಕಿಂಗ್ ಪ್ಲಾಟ್ ಫಾರ್ಮ್ಗಳಿಂದ ಯಾವುದೇ ಸಹಾಯ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ. ಹೋಟೆಲ್ ವೋಚರ್ ಅಥವಾ ಆಹಾರ ಸಹಾಯವನ್ನೂ ನೀಡಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಭಾರತ ಸರ್ಕಾರದ ರಾಯಭಾರ ಕಚೇರಿ ಮಧ್ಯಪ್ರವೇಶಿಸಿದೆ ಎಂದು ವರದಿಯಾಗಿದೆ. ಕೆಲವು ರಾಜಕೀಯ ನಾಯಕರು ಕೂಡ ಏರ್ಲೈನ್ಸ್ ಮತ್ತು ಟ್ರಾವೆಲ್ ಕಂಪನಿಗಳ ಕಾರ್ಯ ವೈಖರಿಯನ್ನು ಟೀಕಿಸಿದ್ದಾರೆ. ನಂತರ ಮೇಕ್ ಮೈ ಟ್ರಿಪ್ ತಂಡವು ಸುನಿಲ್ಗೆ ತಾತ್ಕಾಲಿಕ ಹೋಟೆಲ್ ವ್ಯವಸ್ಥೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ವಿಮಾನ ಸಂಚಾರ ಬಹುತೇಕ ಸ್ಥಗಿತಗೊಂಡಿದ್ದು, ಒಂದೇ ದಿನದಲ್ಲಿ 4,000ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ ಎಂದು ಅಂತರಾಷ್ಟ್ರೀಯ ವರದಿಗಳು ತಿಳಿಸಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಅನುಸರಿಸಲು ಸೂಚಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm