ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm