ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am