ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm