ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am