ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm