ಬ್ರೇಕಿಂಗ್ ನ್ಯೂಸ್
02-01-21 12:28 pm Headline Karnataka News Network ದೇಶ - ವಿದೇಶ
ಭೋಪಾಲ್, ಜ.2: ಮಧ್ಯಪ್ರದೇಶದ ಛತ್ತರ್ಪುರದ ಗ್ರಾಮದಲ್ಲಿ ವಿದ್ಯುತ್ ಸರಬರಾಜು ಕಂಪೆನಿಯ ಕಿರುಕುಳ ತಾಳಲಾರದೆ 35ರ ವಯಸ್ಸಿನ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾಗುವ ಮೊದಲು ರೈತ ಮುನೇಂದ್ರ ರಜಪೂತ್ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ನನ್ನ ಮೃತದೇಹವನ್ನು ಸರಕಾರಕ್ಕೆ ಹಸ್ತಾಂತರಿಸಿ ನನ್ನ ದೇಹದ ಎಲ್ಲ ಅಂಗಾಂಗಗಳನ್ನು ಮಾರಾಟ ಮಾಡಿ ಸಾಲವನ್ನು ಮರುಪಾವತಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿನಂತಿಸಿದ್ದಾರೆ.
ಕೊರೋನ ವೇಳೆ ಬಾಕಿ ಉಳಿಸಲಾಗಿದ್ದ 87,000 ರೂ. ವಸೂಲಿಗಾಗಿ ವಿದ್ಯುತ್ ಸರಬರಾಜು ಕಂಪೆನಿ(ಡಿಸ್ಕಾಂ) ರಜಪೂತ್ಗೆ ಸೇರಿರುವ ಹಿಟ್ಟಿನ ಗಿರಣಿ ಹಾಗೂ ಬೈಕ್ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮೃತ ರೈತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ದೊಡ್ಡ ರಾಜಕಾರಣಿಗಳು ಹಾಗೂ ಉದ್ಯಮಿಗಳು ಹಗರಣಗಳನ್ನು ನಡೆಸಿದ್ದರೂ ಸರಕಾರಿ ಉದ್ಯೋಗಿಗಳು ಅವರ ಮೇಲೆ ಕ್ರಮ ಕೈಗೊಳ್ಳವುದಿಲ್ಲ.ಅವರು ಸಾಲ ಪಡೆದರೆ ಹಣ ಮರು ಪಾವತಿಗೆ ಸಾಕಷ್ಟು ಸಮಯ ನೀಡಲಾಗುತ್ತದೆ ಅಥವಾ ಸಾಲ ಮನ್ನಾ ಮಾಡಲಾಗುತ್ತದೆ. ಆದರೆ, ಬಡವನೊಬ್ಬ ಸಣ್ಣ ಮೊತ್ತದ ಸಾಲ ಪಡೆದರೆ ಸಾಲ ಮರುಪಾವತಿಸಲು ಏಕೆ ಸಾಧ್ಯವಾಗಿಲ್ಲ ಎಂದು ಕೂಡ ಕೇಳುವುದಿಲ್ಲ. ಅದರ ಬದಲಿಗೆ ಎಲ್ಲರೆದುರು ಅವರಿಗೆ ಅವಮಾನ ಮಾಡಲಾಗುತ್ತದೆ ಎಂದು ರೈತ ತನ್ನ ಡೆತ್ ನೋಟ್ನಲ್ಲಿ ಬರೆದಿದ್ದಾರೆ.
ರಜಪೂತ್ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಲಿಲ್ಲ. ಬಳಿಕ ಡಿಸ್ಕಮ್ 87,000 ವಸೂಲಿ ಮಾಡಲು ನೋಟಿಸ್ ನೀಡಿದೆ ಎಂದು ರೈತನ ಕುಟುಂಬ ತಿಳಿಸಿದೆ.
ಮೃತ ರೈತ ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 35-year-old farmer allegedly committed suicide by hanging himself at his village in Chhatarpur district in Bundelkhand region of Madhya Pradesh. The deceased, Munendra Rajput, took the extreme step after discom officials seized his atta chakki (flour mill) and bike for not clearing electricity bills.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm