ಬ್ರೇಕಿಂಗ್ ನ್ಯೂಸ್
02-01-21 12:28 pm Headline Karnataka News Network ದೇಶ - ವಿದೇಶ
ಭೋಪಾಲ್, ಜ.2: ಮಧ್ಯಪ್ರದೇಶದ ಛತ್ತರ್ಪುರದ ಗ್ರಾಮದಲ್ಲಿ ವಿದ್ಯುತ್ ಸರಬರಾಜು ಕಂಪೆನಿಯ ಕಿರುಕುಳ ತಾಳಲಾರದೆ 35ರ ವಯಸ್ಸಿನ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾಗುವ ಮೊದಲು ರೈತ ಮುನೇಂದ್ರ ರಜಪೂತ್ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ನನ್ನ ಮೃತದೇಹವನ್ನು ಸರಕಾರಕ್ಕೆ ಹಸ್ತಾಂತರಿಸಿ ನನ್ನ ದೇಹದ ಎಲ್ಲ ಅಂಗಾಂಗಗಳನ್ನು ಮಾರಾಟ ಮಾಡಿ ಸಾಲವನ್ನು ಮರುಪಾವತಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿನಂತಿಸಿದ್ದಾರೆ.
ಕೊರೋನ ವೇಳೆ ಬಾಕಿ ಉಳಿಸಲಾಗಿದ್ದ 87,000 ರೂ. ವಸೂಲಿಗಾಗಿ ವಿದ್ಯುತ್ ಸರಬರಾಜು ಕಂಪೆನಿ(ಡಿಸ್ಕಾಂ) ರಜಪೂತ್ಗೆ ಸೇರಿರುವ ಹಿಟ್ಟಿನ ಗಿರಣಿ ಹಾಗೂ ಬೈಕ್ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮೃತ ರೈತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ದೊಡ್ಡ ರಾಜಕಾರಣಿಗಳು ಹಾಗೂ ಉದ್ಯಮಿಗಳು ಹಗರಣಗಳನ್ನು ನಡೆಸಿದ್ದರೂ ಸರಕಾರಿ ಉದ್ಯೋಗಿಗಳು ಅವರ ಮೇಲೆ ಕ್ರಮ ಕೈಗೊಳ್ಳವುದಿಲ್ಲ.ಅವರು ಸಾಲ ಪಡೆದರೆ ಹಣ ಮರು ಪಾವತಿಗೆ ಸಾಕಷ್ಟು ಸಮಯ ನೀಡಲಾಗುತ್ತದೆ ಅಥವಾ ಸಾಲ ಮನ್ನಾ ಮಾಡಲಾಗುತ್ತದೆ. ಆದರೆ, ಬಡವನೊಬ್ಬ ಸಣ್ಣ ಮೊತ್ತದ ಸಾಲ ಪಡೆದರೆ ಸಾಲ ಮರುಪಾವತಿಸಲು ಏಕೆ ಸಾಧ್ಯವಾಗಿಲ್ಲ ಎಂದು ಕೂಡ ಕೇಳುವುದಿಲ್ಲ. ಅದರ ಬದಲಿಗೆ ಎಲ್ಲರೆದುರು ಅವರಿಗೆ ಅವಮಾನ ಮಾಡಲಾಗುತ್ತದೆ ಎಂದು ರೈತ ತನ್ನ ಡೆತ್ ನೋಟ್ನಲ್ಲಿ ಬರೆದಿದ್ದಾರೆ.
ರಜಪೂತ್ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಲಿಲ್ಲ. ಬಳಿಕ ಡಿಸ್ಕಮ್ 87,000 ವಸೂಲಿ ಮಾಡಲು ನೋಟಿಸ್ ನೀಡಿದೆ ಎಂದು ರೈತನ ಕುಟುಂಬ ತಿಳಿಸಿದೆ.
ಮೃತ ರೈತ ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 35-year-old farmer allegedly committed suicide by hanging himself at his village in Chhatarpur district in Bundelkhand region of Madhya Pradesh. The deceased, Munendra Rajput, took the extreme step after discom officials seized his atta chakki (flour mill) and bike for not clearing electricity bills.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm