ಬ್ರೇಕಿಂಗ್ ನ್ಯೂಸ್
06-03-26 09:50 am Giridhar Shetty, Headline Karnataka ದೇಶ - ವಿದೇಶ
ನವದೆಹಲಿ, ಮಾರ್ಚ್ 5: ಮಾರ್ಕ್ -48 ಟೊರ್ಪೆಡೋ ಹೆಸರಿನ ಈ ಜಲಾಂತರ್ಗಾಮಿ ಜಗತ್ತಿನ ಅತಿ ಬಲಿಷ್ಠ ನೌಕಾ ಶಕ್ತಿಗಳಲ್ಲಿ ಒಂದು. ಅಮೆರಿಕದ ನೌಕಾಪಡೆಯ ಪ್ರಬಲ ಅಸ್ತ್ರವಾಗಿರುವ ಈ ಜಲಾಂತರ್ಗಾಮಿ ಅಸ್ತ್ರವನ್ನು ಎರಡನೇ ಜಾಗತಿಕ ಯುದ್ಧದ ಬಳಿಕ ಮೊದಲ ಬಾರಿಗೆ ಹಿಂದು ಮಹಾಸಾಗರದಲ್ಲಿ ಸ್ಫೋಟಿಸಿ ಇರಾನಿನ ಯುದ್ಧ ಹಡಗನ್ನು ನಿರ್ನಾಮ ಮಾಡಿದೆ.
ಮಾರ್ಚ್ 4ರಂದು ಶ್ರೀಲಂಕಾ ಬಳಿಯ ಹಿಂದು ಮಹಾಸಾಗರದಲ್ಲಿ ಸಾಗುತ್ತಿದ್ದ ಇರಾನ್ ಯುದ್ಧ ನೌಕೆಯತ್ತ ಈ ಮಾರ್ಕ್ 48 ಟೊರ್ಪೆಡೋ ಅಸ್ತ್ರವನ್ನು ಅಮೆರಿಕ ಪ್ರಯೋಗಿಸಿತ್ತು. 1972ರಲ್ಲಿ ತನ್ನ ಬತ್ತಳಿಕೆ ಸೇರಿಸಿಕೊಂಡಿದ್ದ ಈ ಮಾರ್ಕ್ 48 ಅನ್ನು ಆನಂತರ ಹಲವು ಆಧುನಿಕ ತಂತ್ರಜ್ಞಾನದೊಂದಿಗೆ ಮಾರ್ಪಡಿಸಲಾಗಿತ್ತು. ಸದ್ಯ ಜಗತ್ತಿನ ಹಲವು ಕಡೆಗಳಲ್ಲಿ ಅಮೆರಿಕ ಈ ಅಸ್ತ್ರವನ್ನು ಸನ್ನದ್ಧವಾಗಿರಿಸಿದೆ.




19 ಅಡಿ ಉದ್ದ ಮತ್ತು 21 ಇಂಚ್ ವ್ಯಾಸ, ಒಂದು ಬದಿ ಡೂಮ್ ಮತ್ತೊಂದು ಬದಿ ದೊಡ್ಡ ಸಿಗರೇಟ್ ಮಾದರಿಯಲ್ಲಿರುವ ಈ ಕ್ಷಿಪಣಿ ರೂಪದ ಸ್ಫೋಟಕ ಅಂದಾಜು 1700 ಕೇಜಿ ಭಾರ ಇರುತ್ತದೆ. ಇದನ್ನು ಸಮುದ್ರದಾಳದಲ್ಲಿ ಪ್ರಯೋಗಿಸಲು ಅನುವಾಗುವಂತೆ ಆವಿಷ್ಕರಿಸಲಾಗಿತ್ತು. ಜಲಾಂತರ್ಗಾಮಿ ಹಡಗಿನಲ್ಲಿ ಇದನ್ನು ಕೊಂಡೊಯ್ದು 15-20 ಕಿಮೀ ದೂರದಿಂದ ನಿಗದಿತ ಗುರಿಯೆಡೆಗೆ ಉಡಾಯಿಸಲಾಗುತ್ತದೆ. ನೀರಿನಡಿಯಲ್ಲಿ ಗಂಟೆಗೆ 100 ಕಿಮೀ ವೇಗದಲ್ಲಿ ಈ ಅಸ್ತ್ರ ಮಿಸೈಲ್ ಮಾದರಿಯಲ್ಲೇ ಬಂದು ವಿರುದ್ಧ ದಿಕ್ಕಿನಲ್ಲಿರುವ ಹಡಗಿನೊಳಗೆ ನುಗ್ಗಿ ಅದನ್ನು ಸ್ಫೋಟಿಸುತ್ತದೆ. ಮಾರ್ಕ್ 48 ಸ್ಫೋಟದ ತೀವ್ರತೆ ಭೂಮಿಯ ಮೇಲ್ಭಾಗದಲ್ಲಿ 500 ಪೌಂಡ್ಸ್ ಟಿಎನ್ ಟಿ ಮಾದರಿಯ ಬಾಂಬ್ ಸ್ಫೋಟಕ್ಕೆ ಸಮವಾಗುತ್ತದೆ. ಎಷ್ಟೇ ಸಾಮರ್ಥ್ಯದ ಹಡಗಾಗಿದ್ದರೂ ಈ ಸ್ಫೋಟಕ್ಕೆ ಎರಡಾಗಿ ವಿಭಜನೆಗೊಂಡು ಒಮ್ಮೆಲೇ ನೀರಿನಲ್ಲಿ ಮುಳುಗುತ್ತದೆ. ಹೀಗಾಗಿ ಇದನ್ನು ಕ್ವಿಕ್ ಡೆತ್ ಎಂದು ಅಮೆರಿಕದ ರಕ್ಷಣಾ ಸಚಿವ ಹಗ್ಸೆತ್ ಬಣ್ಣಿಸಿದ್ದಾರೆ.
ಐರಿಸ್ ದೇನಾ ಹೆಸರಿನ ಇರಾನ್ ಹಡಗು ಭಾರತದ ವಿಶಾಖಪಟ್ಟಣದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿತ್ತು. ಅದರಲ್ಲಿ ಒಟ್ಟು 148 ಸಿಬಂದಿ ಇದ್ದರು. ಶ್ರೀಲಂಕಾದ ಗಾಲೆ ದ್ಪೀಪದಿಂದ 40 ಕಿಮೀ ದೂರದಲ್ಲಿ ಘಟನೆ ಸಂಭವಿಸಿದ್ದು, ಲಂಕಾ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸಿ ಹಡಗಿನಲ್ಲಿದ್ದ 32 ಮಂದಿಯನ್ನು ರಕ್ಷಣೆ ಮಾಡಿದೆ. 88 ಶವಗಳನ್ನು ಪತ್ತೆ ಮಾಡಿದ್ದರೆ, ಉಳಿದವರು ನಾಪತ್ತೆಯಾಗಿದ್ದರು. ಅಮೆರಿಕ ತನ್ನಿಂದ ಸಾವಿರಾರು ಕಿಮೀ ದೂರದ ಅಂತಾರಾಷ್ಟ್ರೀಯ ಸಮುದ್ರ ಮಾರ್ಗದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿಯ ದೌರ್ಜನ್ಯ ಎಸಗಿದ್ದು ವಿಶ್ವ ರಾಷ್ಟ್ರಗಳ ಖಂಡನೆಗೆ ಕಾರಣವಾಗಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಈ ಘಟನೆಯನ್ನು ತೀವ್ರ ಖಂಡಿಸಿದ್ದಲ್ಲದೆ, ಇದಕ್ಕಾಗಿ ಅಮೆರಿಕ ವಿಷಾದ ಪಡಬೇಕಾಗುತ್ತದೆ. ಅಂತಹ ದಿನ ಬಂದೇ ಬರುತ್ತದೆ. ಯಾಕಂದ್ರೆ, ಅಮೆರಿಕವು ಸಮುದ್ರದಲ್ಲಿ ಅಮಾನುಷ ರೀತಿಯ ದೌರ್ಜನ್ಯದ ಕೃತ್ಯ ಎಸಗಿದೆ ಎಂದಿದ್ದಾರೆ.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm