ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm