ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm