ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm