ಬ್ರೇಕಿಂಗ್ ನ್ಯೂಸ್
12-03-26 09:01 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಇರಾನ್ ಯುದ್ಧ ಕೊನೆಗೊಳಿಸಲು ಅಮೆರಿಕಕ್ಕೆ ಷರತ್ತುಗಳನ್ನು ವಿಧಿಸಿದೆ. ಯುದ್ಧ ನಿಲ್ಲಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕು. ಶಾಂತಿ ಸ್ಥಾಪನೆಗಾಗಿ ಮೂರು ಪ್ರಮುಖ ಷರತ್ತುಗಳನ್ನು ಜಾರಿಗೆ ತರಬೇಕೆಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.
ಅಮೆರಿಕವು ಇರಾನ್ ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಮತ್ತು ಇತ್ತೀಚಿನ ಸಂಘರ್ಷದಿಂದ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು. ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ದಾಳಿ ನಡೆಯಬಾರದು ಎಂಬ ಸ್ಪಷ್ಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರವಸೆ ನೀಡಬೇಕು. ಈ ಷರತ್ತುಗಳನ್ನು ಒಪ್ಪಿದರೆ ಮಾತ್ರ ಯುದ್ಧ ನಿಲ್ಲುತ್ತದೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದು ಅಮೆರಿಕ ಮತ್ತು ಇಸ್ರೇಲ್ ಮೇಲೆ ಒತ್ತಡ ಹೆಚ್ಚಿಸಿದೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಪೆಜೆಶ್ಲಿಯಾನ್, ಈ ಷರತ್ತುಗಳನ್ನು ಹಾಕಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ತಮ್ಮ ದೇಶ ಬದ್ಧವಾಗಿದೆ ಎಂದೂ ಪೆಜೆಶ್ಕಿಯಾನ್ ಪುನರುಚ್ಚರಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಸೌದ್ ಪೆಜೆಶ್ಕಿಯನ್, ರಷ್ಯಾ ಮತ್ತು ಪಾಕಿಸ್ತಾನದ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಗಾಗಿ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ ಎಂದಿದ್ದಾರೆ.
ಇಸ್ರೇಲ್ ಖಡಕ್ ಪ್ರತಿಕ್ರಿಯೆ:
ಯುದ್ಧ ನಿಲ್ಲಲು ಇರಾನ್ ಷರತ್ತು ವಿಧಿಸಿದ್ದಕ್ಕೆ ಇಸ್ರೇಲ್ ಖಡಕ್ ಪ್ರತಿಕ್ರಿಯೆ ನೀಡಿದೆ. "ಅಗತ್ಯ ಇರುವ ವರೆಗೆ ಇರಾನ್ನೊಂದಿಗೆ ಯುದ್ಧ ಮುಂದುವರಿಸಲು ನಾವು ಸಿದ್ಧರಿದ್ದೇವೆ" ಎಂದು ಇಸ್ರೇಲ್ನ ಸೇನಾ ವಕ್ತಾರರು ಹೇಳಿದ್ದಾರೆ. ಇತ್ತೀಚೆಗಷ್ಟೇ ದಾಳಿ ನಡೆಸಿದ್ದ ಇಸ್ರೇಲ್ ಪಡೆಗಳು ಸಮುದ್ರದಲ್ಲಿ ಬಾಂಬ್ ಇಡುತ್ತಿದ್ದ ಇರಾನ್ನ 16 ಹಡಗುಗಳನ್ನು ಧ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿ ತೀವ್ರ ಹಾನಿ ಉಂಟು ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವಿಗೀಡಾಗಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm