ಬ್ರೇಕಿಂಗ್ ನ್ಯೂಸ್
13-03-26 04:18 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 13: ಇಡೀ ವಿಶ್ವವನ್ನೇ ಅಲ್ಲೋಲ ಕಲ್ಲೋಲ ಮಾಡಿರುವ ಅಮೆರಿಕಾ -ಇರಾನ್- ಇಸ್ರೇಲ್ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ನಂತರ ಇರಾನ್ ದೇಶದ ನೂತನ ನಾಯಕನಾಗಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರ ಮೇಲೆ ದಾಳಿಯಾಗಿದ್ದು ಕಾಲುಗಳನ್ನು ಕಳಕೊಂಡು ಗಂಭೀರ ಸ್ಥಿತಿಯಲ್ಲಿದ್ದಾರೆಂದು ವದಂತಿ ಹರಡಿದೆ.
ಕೆಲವು ಅಂತರರಾಷ್ಟ್ರೀಯ ಮಾಧ್ಯಮಗಳು, ಮೊಜ್ತಬಾ ಖಮೇನಿ ಅಮೆರಿಕಾದ ವೈಮಾನಿಕ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದು, ಒಂದು ಅಥವಾ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಜೊತೆಗೆ, ಲಿವರ್ ಭಾಗಕ್ಕೆ ಏಟು ಬಿದ್ದು ಕೋಮಾಗೆ ಜಾರಿದ್ದಾರೆ ಎಂದು ವರದಿ ಮಾಡಿವೆ. ಫಸ್ಟ್ ಪೋಸ್ಟ್ ವರದಿ ಪ್ರಕಾರ, ಖಮೇನಿ ಅವರನ್ನು ಸಿನಾ ಯುನಿವರ್ಸಿಟಿ ಹಾಸ್ಪಿಟಲ್ ನಲ್ಲಿ ಐಸಿಯುನಲ್ಲಿ ಇರಿಸಲಾಗಿದೆ. ಅವರ ಒಂದು ಅಥವಾ ಎರಡೂ ಕಾಲು ತುಂಡಾಗಿದೆ. ಹೊಟ್ಟೆ ತೀವ್ರ ಜರ್ಝರಿತವಾಗಿದ್ದು ಇರಾನ್ ಸರ್ಕಾರದ ಆರೋಗ್ಯ ಸಚಿವ ಮಹಮ್ಮದ್ ರೆಜಾ ಝಫರ್ಗಂಡಿ ಅವರ ಮೇಲುಸ್ತುವಾರಿಯಲ್ಲಿ ನೋಡಿಕೊಳ್ಳಲಾಗುತ್ತಿದೆ. ಅವರನ್ನು ಇರಿಸಿರುವ ಕಟ್ಟಡಕ್ಕೆ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಸೀರಿಯಸ್ ಸ್ಥಿತಿಯಲ್ಲಿದ್ದು ಅವರನ್ನು ಡಾ.ಮಹಮ್ಮದ್ ಮರಾಷಿ ಚಿಕಿತ್ಸೆ ನೀಡುತ್ತಿದ್ದಾರೆ. ಮರಾಷಿ ಅವರು ಇರಾನ್ ಮಾಜಿ ಅಧ್ಯಕ್ಷ ಅಕ್ಬರ್ ಹಾಶೆಮಿ ರಫ್ಸಂಜಾನಿಯವರ ಪತ್ನಿಯ ಸೋದರನಾಗಿದ್ದು ಧಾರ್ಮಿಕ ವಲಯದಲ್ಲಿ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ.
ಇದಲ್ಲದೆ, ಮೊಜ್ತಬಾ ಖಮೇನಿ ಕಳೆದ ಹಲವು ಸಮಯದಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ ಅವರು ಸತ್ತಿರಬಹುದು ಎಂದೂ ಜನರು ಆಡಿಕೊಳ್ಳುತ್ತಿದ್ದಾರೆ. ಆದರೆ ಇರಾನ್ ಸರ್ಕಾರ, ಈ ರೀತಿಯ ವರದಿ, ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಇರಾನ್ ವಕ್ತಾರರ ಪ್ರಕಾರ, ಮೊಜ್ತಬಾ ಖಮೇನಿ ಸುರಕ್ಷಿತರಾಗಿದ್ದು, ದೇಶದ ಆಡಳಿತ ಮತ್ತು ಉನ್ನತ ಮಟ್ಟದ ನಿರ್ಧಾರಗಳಲ್ಲಿ ಭಾಗವಹಿಸುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ತಿಳಿಸಿದೆ.
ಕೆಲವು ವರದಿಗಳ ಪ್ರಕಾರ, ಫೆಬ್ರವರಿ 28 ರಂದು ಟೆಹ್ರಾನ್ನಲ್ಲಿ ನಡೆದ ದಾಳಿಯ ವೇಳೆಯೇ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಮತ್ತು ಪುತ್ರ ಮೊಜ್ತಬಾ ಖಮೇನಿ ಕೂಡ ಗಾಯಗೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫಾಕ್ಸ್ ನ್ಯೂಸ್ ರೇಡಿಯೊದಲ್ಲಿ “ಖಮೇನಿ ಉಸಿರಾಡುತ್ತಿದ್ದಾರೆ, ಜೀವಂತ ಇರಲೂಬಹುದು” ಎಂದು ಹೇಳಿದ್ದಾರೆ.
ಫೆ.28ರ ದಾಳಿಯಲ್ಲಿ ಮೊಜ್ತಬಾ ಖಮೇನಿ ಅವರ ಪತ್ನಿ, ಸಹೋದರ, ಸೊಸೆ ಮತ್ತು ತಂದೆ ಅಯತೊಲ್ಲಾ ಖಮೇನಿ ಸೇರಿದಂತೆ ಖಮೇನಿ ಕುಟುಂಬದ ಸದಸ್ಯರು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ, ಯುದ್ಧದ ಪ್ರಾರಂಭದಿಂದಲೂ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ತಮ್ಮ ಮೊದಲ ಸಾರ್ವಜನಿಕ ಪ್ರತಿಜ್ಞೆ ಸಂದೇಶವನ್ನು ವೈಯಕ್ತಿಕವಾಗಿ ವೀಡಿಯೋ ಮೂಲಕ ನೀಡಿಲ್ಲ. ಇದು ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅನಿಶ್ಚಿತತೆಯನ್ನು ಹೆಚ್ಚಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm