ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm