ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm