ಬ್ರೇಕಿಂಗ್ ನ್ಯೂಸ್
15-03-26 04:57 pm HK News Desk ದೇಶ - ವಿದೇಶ
ಟೆಹ್ರಾನ್, ಮಾರ್ಚ್ 15: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ಯುದ್ಧ 16ನೇ ದಿನಕ್ಕೆ ಕಾಲಿಟ್ಟಿರುವಾಗಲೇ ಅಮೆರಿಕ ವಿರುದ್ಧ ತೊಡೆ ತಟ್ಟಲು ಯೆಮನ್ ಮೂಲದ ಹೌತಿ ಬಂಡುಕೋರ ಉಗ್ರರು ಸಜ್ಜಾಗಿದ್ದಾರೆ. ಇವರು ರಂಗಕ್ಕಿಳಿದರೆ ಹರ್ಮುಜ್ ಬಳಿಕ ಏಶ್ಯಾ - ಯುರೋಪ್ ಸಂಪರ್ಕದ ಮತ್ತೊಂದು ಜಲಸಂಧಿ ಬಂದ್ ಆಗುವ ಸಾಧ್ಯತೆಯಿದೆ.
ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹೌತಿಗಳು ಯುದ್ಧಕ್ಕೆ ಕೈಜೋಡಿಸಿದರೆ ಹಾರ್ಮುಜ್ ಬಳಿಕ ಮತ್ತೊಂದು ನಿರ್ಣಾಯಕ ಜಲಸಂಧಿ ಬಾಬ್ ಎಲ್- ಮಂಡೇಬ್ ಬಂದ್ ಆಗಲಿದೆ. ಹರ್ಮುಜ್ ಬಳಿಕ ಈ ಜಲಸಂಧಿಯೂ ಬಂದ್ ಆದರೆ, ಜಾಗತಿಕ ವ್ಯಾಪಾರದ ಮೇಲೆ ಮತ್ತಷ್ಟು ಹೊಡೆತ ಬೀಳಲಿದೆ. ಇಲ್ಲಿಯ ವರೆಗೂ ಇರಾನ್ ವಿರುದ್ಧದ ಯುದ್ಧಕ್ಕೆ ಏನನ್ನೂ ಪ್ರತಿಕ್ರಿಯಿಸದ ಹೌತಿಗಳು ಈಗ ಮಾತನಾಡಿದ್ದು ಯಾವುದೇ ಕ್ಷಣದಲ್ಲಿ ಪ್ರತಿಕ್ರಿಯಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಹೌತಿಗಳು ಈ ಪ್ರದೇಶದಲ್ಲಿ ಇರಾನ್ನ ಮೂರು-ಹಂತದ ತಂತ್ರದ ಭಾಗವಾಗಲಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.
ಇದೇ ವೇಳೆ ಹೌತಿಗಳು ಜೊತೆಗೆ ಇತರ ಬಂಡುಕೋರ ಗುಂಪುಗಳೂ ಆಲರ್ಟ್ ಆಗಿದ್ದಾರೆ. ಇರಾನ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸೇರಬಹುದು. ಇದರಿಂದ ಬಾಬ್ ಎಲ್- ಮಂಡೇಬ್ ಜಲಸಂಧಿ ಬಂದ್ ಆಗಬಹುದು ಎಂದು ಇರಾನ್ ಫಾಕ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡುವ ಮೂಲಕ ಸರಕು ಸಾಗಣೆ ಹಡಗುಗಳ ಮಾರ್ಗವನ್ನು ತಡೆಯುತ್ತಿರುವ ವರದಿಗಳ ನಡುವೆ ಇದೀಗ ಅದರಂತೆ ನಿರ್ಣಾಯಕವಾದ ಮತ್ತೊಂದು ಜಲಸಂಧಿ ಬಾಬ್ ಎಲ್-ಮಂಡೇಬ್ ಬಂದ್ ಮಾಡಲು ಮುಂದಾಗಿದೆ.
ಬಾಬ್ ಎಲ್-ಮಂಡೇಬ್ ಕೆಂಪು ಸಮುದ್ರ ಮತ್ತು ಹಿಂದೂ ಮಹಾಸಾಗರವನ್ನು ಮೆಡಿಟರೇನಿಯನ್ ಸಮುದ್ರಕ್ಕೆ ಮತ್ತು ಅಟ್ಲಾಂಟಿಕ್ ಸಾಗರಕ್ಕೆ ಪರಿಣಾಮಕಾರಿಯಾಗಿ ಸಂಪರ್ಕಿಸುತ್ತದೆ. ಈ ಮಾರ್ಗವು ಏಷ್ಯಾ-ಯುರೋಪ್ ವ್ಯಾಪಾರಕ್ಕೆ ಪ್ರಮುಖವಾಗಿದೆ. ಬಾಬ್ ಎಲ್-ಮಂಡೇಬ್ ಮಾರ್ಗವನ್ನು ನಿರ್ಬಂಧಿಸಲು ಹೌತಿಗಳು ಮುಂದಾದರೆ ಯುದ್ಧ ಮತ್ತಷ್ಟು ವಿನಾಶಕಾರಿಯಾಗಲಿದೆ. ಜಾಗತಿಕ ವ್ಯಾಪಾರವು ಭಾರಿ ಆಘಾತವನ್ನು ಎದುರಿಸಬೇಕಾಗುತ್ತದೆ. ಇಲ್ಲಿಂದ ಪ್ರಪಂಚದ ಸರಿಸುಮಾರು ಶೇ.30 ರಷ್ಟು ತೈಲವನ್ನು ಒಯ್ಯುತ್ತವೆ ಮತ್ತು ಸೂಯೆಜ್ ಕಾಲುವೆಯ ಮೂಲಕ ಏಷ್ಯಾ-ಯುರೋಪ್ ಕಡಲ ವ್ಯಾಪಾರದ ಪ್ರಮುಖ ಪಾಲನ್ನು ನಿರ್ವಹಿಸುತ್ತವೆ. ಸೌದಿ ಅರೇಬಿಯಾ ಈ ಜಲಸಂಧಿ ಮೂಲಕ ಕೆಂಪು ಸಮುದ್ರದ ಪ್ರವೇಶ ದ್ವಾರದಲ್ಲಿ ಪರ್ಯಾಯ ತೈಲ ವಿತರಣಾ ಮಾರ್ಗವನ್ನು ಪ್ರಾರಂಭಿಸಿದೆ ಎಂಬ ಅಂಶವನ್ನು ಗಮನದಲ್ಲಿಟ್ಟು, ಬಾಲ್ ಎಲ್-ಮಂಡೇಬ್ ಸಂಭಾವ್ಯ ಬಂದ್ ಆಗುವುದು ಮಹತ್ವ ಪಡೆದುಕೊಂಡಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm