ಬ್ರೇಕಿಂಗ್ ನ್ಯೂಸ್
15-03-26 04:57 pm HK News Desk ದೇಶ - ವಿದೇಶ
ಟೆಹ್ರಾನ್, ಮಾರ್ಚ್ 15: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ಯುದ್ಧ 16ನೇ ದಿನಕ್ಕೆ ಕಾಲಿಟ್ಟಿರುವಾಗಲೇ ಅಮೆರಿಕ ವಿರುದ್ಧ ತೊಡೆ ತಟ್ಟಲು ಯೆಮನ್ ಮೂಲದ ಹೌತಿ ಬಂಡುಕೋರ ಉಗ್ರರು ಸಜ್ಜಾಗಿದ್ದಾರೆ. ಇವರು ರಂಗಕ್ಕಿಳಿದರೆ ಹರ್ಮುಜ್ ಬಳಿಕ ಏಶ್ಯಾ - ಯುರೋಪ್ ಸಂಪರ್ಕದ ಮತ್ತೊಂದು ಜಲಸಂಧಿ ಬಂದ್ ಆಗುವ ಸಾಧ್ಯತೆಯಿದೆ.
ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹೌತಿಗಳು ಯುದ್ಧಕ್ಕೆ ಕೈಜೋಡಿಸಿದರೆ ಹಾರ್ಮುಜ್ ಬಳಿಕ ಮತ್ತೊಂದು ನಿರ್ಣಾಯಕ ಜಲಸಂಧಿ ಬಾಬ್ ಎಲ್- ಮಂಡೇಬ್ ಬಂದ್ ಆಗಲಿದೆ. ಹರ್ಮುಜ್ ಬಳಿಕ ಈ ಜಲಸಂಧಿಯೂ ಬಂದ್ ಆದರೆ, ಜಾಗತಿಕ ವ್ಯಾಪಾರದ ಮೇಲೆ ಮತ್ತಷ್ಟು ಹೊಡೆತ ಬೀಳಲಿದೆ. ಇಲ್ಲಿಯ ವರೆಗೂ ಇರಾನ್ ವಿರುದ್ಧದ ಯುದ್ಧಕ್ಕೆ ಏನನ್ನೂ ಪ್ರತಿಕ್ರಿಯಿಸದ ಹೌತಿಗಳು ಈಗ ಮಾತನಾಡಿದ್ದು ಯಾವುದೇ ಕ್ಷಣದಲ್ಲಿ ಪ್ರತಿಕ್ರಿಯಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಹೌತಿಗಳು ಈ ಪ್ರದೇಶದಲ್ಲಿ ಇರಾನ್ನ ಮೂರು-ಹಂತದ ತಂತ್ರದ ಭಾಗವಾಗಲಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.
ಇದೇ ವೇಳೆ ಹೌತಿಗಳು ಜೊತೆಗೆ ಇತರ ಬಂಡುಕೋರ ಗುಂಪುಗಳೂ ಆಲರ್ಟ್ ಆಗಿದ್ದಾರೆ. ಇರಾನ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸೇರಬಹುದು. ಇದರಿಂದ ಬಾಬ್ ಎಲ್- ಮಂಡೇಬ್ ಜಲಸಂಧಿ ಬಂದ್ ಆಗಬಹುದು ಎಂದು ಇರಾನ್ ಫಾಕ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡುವ ಮೂಲಕ ಸರಕು ಸಾಗಣೆ ಹಡಗುಗಳ ಮಾರ್ಗವನ್ನು ತಡೆಯುತ್ತಿರುವ ವರದಿಗಳ ನಡುವೆ ಇದೀಗ ಅದರಂತೆ ನಿರ್ಣಾಯಕವಾದ ಮತ್ತೊಂದು ಜಲಸಂಧಿ ಬಾಬ್ ಎಲ್-ಮಂಡೇಬ್ ಬಂದ್ ಮಾಡಲು ಮುಂದಾಗಿದೆ.
ಬಾಬ್ ಎಲ್-ಮಂಡೇಬ್ ಕೆಂಪು ಸಮುದ್ರ ಮತ್ತು ಹಿಂದೂ ಮಹಾಸಾಗರವನ್ನು ಮೆಡಿಟರೇನಿಯನ್ ಸಮುದ್ರಕ್ಕೆ ಮತ್ತು ಅಟ್ಲಾಂಟಿಕ್ ಸಾಗರಕ್ಕೆ ಪರಿಣಾಮಕಾರಿಯಾಗಿ ಸಂಪರ್ಕಿಸುತ್ತದೆ. ಈ ಮಾರ್ಗವು ಏಷ್ಯಾ-ಯುರೋಪ್ ವ್ಯಾಪಾರಕ್ಕೆ ಪ್ರಮುಖವಾಗಿದೆ. ಬಾಬ್ ಎಲ್-ಮಂಡೇಬ್ ಮಾರ್ಗವನ್ನು ನಿರ್ಬಂಧಿಸಲು ಹೌತಿಗಳು ಮುಂದಾದರೆ ಯುದ್ಧ ಮತ್ತಷ್ಟು ವಿನಾಶಕಾರಿಯಾಗಲಿದೆ. ಜಾಗತಿಕ ವ್ಯಾಪಾರವು ಭಾರಿ ಆಘಾತವನ್ನು ಎದುರಿಸಬೇಕಾಗುತ್ತದೆ. ಇಲ್ಲಿಂದ ಪ್ರಪಂಚದ ಸರಿಸುಮಾರು ಶೇ.30 ರಷ್ಟು ತೈಲವನ್ನು ಒಯ್ಯುತ್ತವೆ ಮತ್ತು ಸೂಯೆಜ್ ಕಾಲುವೆಯ ಮೂಲಕ ಏಷ್ಯಾ-ಯುರೋಪ್ ಕಡಲ ವ್ಯಾಪಾರದ ಪ್ರಮುಖ ಪಾಲನ್ನು ನಿರ್ವಹಿಸುತ್ತವೆ. ಸೌದಿ ಅರೇಬಿಯಾ ಈ ಜಲಸಂಧಿ ಮೂಲಕ ಕೆಂಪು ಸಮುದ್ರದ ಪ್ರವೇಶ ದ್ವಾರದಲ್ಲಿ ಪರ್ಯಾಯ ತೈಲ ವಿತರಣಾ ಮಾರ್ಗವನ್ನು ಪ್ರಾರಂಭಿಸಿದೆ ಎಂಬ ಅಂಶವನ್ನು ಗಮನದಲ್ಲಿಟ್ಟು, ಬಾಲ್ ಎಲ್-ಮಂಡೇಬ್ ಸಂಭಾವ್ಯ ಬಂದ್ ಆಗುವುದು ಮಹತ್ವ ಪಡೆದುಕೊಂಡಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am