ಬ್ರೇಕಿಂಗ್ ನ್ಯೂಸ್
16-03-26 12:34 pm HK News Staffer ದೇಶ - ವಿದೇಶ
ಕಟಕ್, ಮಾರ್ಚ್ 16: ಒಡಿಶಾ ರಾಜ್ಯದ ಕಟಕ್ ನಗರದಲ್ಲಿರುವ ಎಸ್ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ 2.30ರಿಂದ 3 ಗಂಟೆಯ ಅವಧಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ವೇಳೆ ಐಸಿಯುನಲ್ಲಿ ಗಂಭೀರವಾಗಿ ಗಾಯಗೊಂಡ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಬೆಂಕಿ ಅವಘಡದ ಪರಿಣಾಮ ಐಸಿಯುನಲ್ಲಿದ್ದ 10 ರೋಗಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಗಿಗಳನ್ನು ರಕ್ಷಿಸಲು ಯತ್ನಿಸಿದ ಆಸ್ಪತ್ರೆ ಸಿಬ್ಬಂದಿಯಲ್ಲಿ 11 ಮಂದಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬಳಿಕ ಐಸಿಯುನಲ್ಲಿದ್ದ ಇತರ ರೋಗಿಗಳನ್ನು ತುರ್ತಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆ ವಾರ್ಡ್ಗಳಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಆಸ್ಪತ್ರೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮೃತಪಟ್ಟ ರೋಗಿಗಳ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜೊತೆಗೆ ಗಾಯಗೊಂಡಿರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm