ಬ್ರೇಕಿಂಗ್ ನ್ಯೂಸ್
16-03-26 09:30 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 16: ಭಾರತ ಮೂಲದ ಧಾರ್ಮಿಕ ಸಂಘಟನೆ ಆರ್ಎಸ್ಎಸ್ ಬ್ಯಾನ್ ಮಾಡುವಂತೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತದ ಗುಪ್ತಚರ ಸಂಸ್ಥೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಮೇಲೆ (RAW) ಡೊನಾಲ್ಡ್ ಟ್ರಂಪ್ ಸರ್ಕಾರ ನಿರ್ಬಂಧ ವಿಧಿಸಬೇಕು ಎಂದು ಯುನೈಟೆಡ್ ಸ್ಟೇಟ್ಸ್ ಆಯೋಗ (USCIRF) ಹೇಳಿದೆ. ವರದಿಯು ಎರಡೂ ಸಂಸ್ಥೆಗಳ ಕಾರ್ಯ ವಿಧಾನಗಳ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಾಗರಿಕರ ಮೇಲಿನ ಕಿರುಕುಳದ ಆಧಾರದ ಮೇಲೆ ಭಾರತಕ್ಕೆ ಶಸ್ತ್ರಾಸ್ತ್ರಗಳ ಮಾರಾಟ ನಿಲ್ಲಿಸಲು ಸಹ ಆಯೋಗ ಶಿಫಾರಸು ಮಾಡಿದೆ.
ಭಾರತ ಮತ್ತು ಅಮೆರಿಕ ನಡುವಿನ ಭವಿಷ್ಯದ ಮಿಲಿಟರಿ ಮತ್ತು ವ್ಯಾಪಾರ ಸಂಬಂಧವನ್ನು ಧಾರ್ಮಿಕ ಸ್ವಾತಂತ್ರ್ಯದ ಆಧಾರದ ಮೇಲೆ ಮರು ಪರಿಶೀಲಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆರ್ಎಸ್ಎಸ್ ವಿರುದ್ಧ ಅಮೇರಿಕನ್ ಸಮಿತಿ ಸೂಚಿಸಿದ ನಿರ್ಬಂಧಗಳಲ್ಲಿ ಸಂಸ್ಥೆಯ ಆಸ್ತಿಗಳನ್ನು ವಶಪಡಿಸುವುದು ಮತ್ತು ಅದರ ಸದಸ್ಯರು ಅಮೆರಿಕಕ್ಕೆ ಪ್ರವೇಶಿಸುವುದನ್ನು ನಿಷೇಧಿಸುವುದು ಸೇರಿವೆ. ಆಯೋಗವು ಭಾರತದ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ವಿರುದ್ಧವೂ ಶಿಫಾರಸುಗಳನ್ನು ಮಾಡಿದೆ. ಆಯೋಗದ 2026ರ ವಾರ್ಷಿಕ ವರದಿಯಲ್ಲಿ ಇದನ್ನು ಸೂಚಿಸಲಾಗಿದೆ.
ಯುಎಸ್ಸಿಐಆರ್ಎಫ್ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೇಲ್ವಿಚಾರಣೆ ಮಾಡುವ ಮತ್ತು ಶ್ವೇತಭವನಕ್ಕೆ ಶಿಫಾರಸು ಮಾಡುವ ಅಮೆರಿಕದ ಸ್ವತಂತ್ರ ಸಂಸ್ಥೆಯಾಗಿದೆ.
ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಆರೋಪ:
ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಸಂಚುಗಳಲ್ಲಿ RAW ಭಾಗಿಯಾಗಿದೆ ಎಂದು 2025 ರಲ್ಲಿ ಆಯೋಗವು ಆರೋಪಿಸಿತ್ತು. ಇದರಿಂದ ಭಾರತವನ್ನು ನಿರ್ದಿಷ್ಟ ಕಾಳಜಿಯ ದೇಶ (CPC) ಎಂದು ಹೆಸರಿಸುವಂತೆ ಆಯೋಗವು ಟ್ರಂಪ್ ಆಡಳಿತಕ್ಕೆ ಒತ್ತಾಯಿಸಿದೆ. ಆಯೋಗವು ನಿರ್ದಿಷ್ಟ ಕಾಳಜಿಯ ದೇಶಗಳೆಂದು ಹೆಸರಿಸಲು ಶಿಫಾರಸು ಮಾಡಿದ 18 ದೇಶಗಳಲ್ಲಿ ಭಾರತವೂ ಸೇರಿದೆ. ಭಾರತದ ಜೊತೆಗೆ, ಈ ಪಟ್ಟಿಯಲ್ಲಿ ಅಫ್ಘಾನಿಸ್ತಾನ, ಮ್ಯಾನ್ಮಾರ್, ಚೀನಾ, ಕ್ಯೂಬಾ, ಎರಿಟ್ರಿಯಾ, ಇರಾನ್, ಲಿಬಿಯಾ, ನಿಕರಾಗುವಾ, ನೈಜೀರಿಯಾ, ಉತ್ತರ ಕೊರಿಯಾ, ಪಾಕಿಸ್ತಾನ, ರಷ್ಯಾ, ಸೌದಿ ಅರೇಬಿಯಾ, ಸಿರಿಯಾ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ವಿಯೆಟ್ನಾಂ ಸೇರಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm