ಬ್ರೇಕಿಂಗ್ ನ್ಯೂಸ್
19-03-26 04:35 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 19: ಇರಾನ್- ಅಮೆರಿಕ ಯುದ್ಧದಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ತೈಲ ಹೊತ್ತ ನೂರಾರು ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ. ಭಾರತದ 22ಕ್ಕೂ ಹೆಚ್ಚು ಹಡಗುಗಳು ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಸಿಲುಕಿರುವುದಾಗಿ ಕೇಂದ್ರ ಸರ್ಕಾರದ ಶಿಪ್ಪಿಂಗ್ ಸಚಿವಾಲಯ ಮಾಹಿತಿ ನೀಡಿದೆ.
ಈಗಾಗಲೇ ‘ಶಿವಾಲಿಕ್’ ಮತ್ತು ‘ನಂದಾದೇವಿ’ ಹಡಗುಗಳು ಸೇರಿ ಸುಮಾರು 92 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಭಾರತಕ್ಕೆ ತಲುಪಿಸಿವೆ. ‘ಜಗ್ ಲಾಡ್ಕಿ’ ಸೇರಿದಂತೆ ಇನ್ನೂ ಕೆಲವು ಹಡಗುಗಳು ಕಚ್ಚಾ ತೈಲವನ್ನು ಹೊತ್ತು ದೇಶ ತಲುಪುತ್ತಿದೆ. ಇದೇ ವೇಳೆ, ಅಲ್ಲಿ ಸಿಕ್ಕಿಬಿದ್ದ ಎಲ್ಲ ಹಡಗುಗಳನ್ನು ಸುರಕ್ಷಿತವಾಗಿ ಕರೆತರಲು ಭಾರತೀಯ ನೌಕಾಪಡೆ ಒಮಾನ್ ಗಲ್ಫ್ ಭಾಗದತ್ತ ಯುದ್ಧನೌಕೆಗಳನ್ನು ರವಾನಿಸಿದೆ ಎಂಬ ಮಾಹಿತಿಗಳಿವೆ.
ತೈಲ ಹಡಗುಗಳಿಗೆ ಎಸ್ಕಾರ್ಟ್ ನೀಡಲು 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ದೃಢೀಕರಣ ನೀಡಿಲ್ಲ. ಇದೇ ವೇಳೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಬಂದ್ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇರಾನ್ ಪ್ರತಿ ಹಡಗಿನ ದಾಖಲೆಗಳನ್ನು ಪರಿಶೀಲಿಸಿ ಬಳಿಕವೇ ಸಾಗಲು ಅನುಮತಿ ನೀಡುತ್ತಿದೆ. ಅಮೆರಿಕಕ್ಕೆ ಸಂಬಂಧಿಸಿದ ಹಡಗುಗಳನ್ನು ಮಾತ್ರ ತಡೆಯಲಾಗುತ್ತಿದೆ ಎಂಬ ಮಾಹಿತಿಯಿದೆ. ಭಾರತ ಸೇರಿದಂತೆ ಹಲವು ದೇಶಗಳ ಹಡಗುಗಳನ್ನು ಪರಿಶೀಲನೆ ಬಳಿಕ ಬಿಡುಗಡೆ ಮಾಡಲಾಗಿದೆ.
ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ:
ಇತ್ತ ದೇಶದಲ್ಲಿ ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಪಿಜಿ ಉತ್ಪಾದನೆಯನ್ನು ಶೇಕಡಾ 40ರಷ್ಟು ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈಗಾಗಲೇ 15 ರಾಜ್ಯಗಳಲ್ಲಿ ಕಮರ್ಷಿಯಲ್ ಎಲ್ಪಿಜಿ ವಿತರಣೆ ಆರಂಭಗೊಂಡಿದ್ದು, ಸುಮಾರು 7,200 ಟನ್ ಅನಿಲವನ್ನು ಹೆಚ್ಚುವರಿಯಾಗಿ ಪೂರೈಸಲಾಗಿದೆ ಎಂದು ಇಲಾಖೆ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದ್ದಾರೆ.
ಕಮರ್ಷಿಯಲ್ ಎಲ್ಪಿಜಿ ಸಿಗದೆ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ತೀವ್ರ ಬಿಕ್ಕಟ್ಟಿನ ಸ್ಥಿತಿ ಎದುರಾಗಿದ್ದು ರೆಸ್ಟೋರೆಂಟ್, ಹೊಟೇಲುಗಳು ಬಂದ್ ಆಗಿವೆ. ರಾಜ್ಯದಲ್ಲಿ ದಿನಕ್ಕೆ ಒಂದು ಸಾವಿರ ಅಷ್ಟೇ ಕಮರ್ಷಿಯಲ್ ಗ್ಯಾಸ್ ಲಭ್ಯ ಇದೆ, ಅದನ್ನು ಯಾರಿಗಂತ ಕೊಡೋಕಾಗುತ್ತೆ. ರಾಜ್ಯದಲ್ಲಿ 40 ಸಾವಿರ ರೆಸ್ಟೋರೆಂಟ್ ಇದೆ ಎಂದು ಸಚಿವ ಮುನಿಯಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am