ಬ್ರೇಕಿಂಗ್ ನ್ಯೂಸ್
19-03-26 04:51 pm HK News Staffer ದೇಶ - ವಿದೇಶ
ಲಂಡನ್, ಮಾ 19: ರಸ್ತೆಯಲ್ಲಿ ಪಾನ್ ಉಗುಳಿದ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳಿಗೆ ಭಾರೀ ದಂಡ ವಿಧಿಸಿರುವ ಘಟನೆ ಗಮನ ಸೆಳೆಯುತ್ತಿದೆ. ಸ್ವಚ್ಛತೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಬ್ರಿಟನ್ ಆಡಳಿತ, ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಂಡಿದೆ.
ಎಡ್ಗ್ವೇರ್ ನಿವಾಸಿ ಅಕ್ಷಿತ್ಕುಮಾರ್ ಮತ್ತು ಹಿತೇಶ್ ಪಟೇಲ್ ಜೂನ್ 11, 2025ರಂದು ಕಿಂಗ್ಸ್ಬರಿ ರಸ್ತೆಯಲ್ಲಿ ಪಾನ್ ಉಗುಳಿದ ಪ್ರಕರಣದಲ್ಲಿ ಮೊದಲಿಗೆ 100 ಯುರೋ ದಂಡ ವಿಧಿಸಲಾಗಿತ್ತು. ಆದರೆ ದಂಡ ಪಾವತಿಸದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನಂತರ ದಂಡವನ್ನು 1,391 ಯುರೋಗೆ ಏರಿಸಿ ವಿಧಿಸಲಾಗಿದೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ರುಯಿಸ್ಲಿಪ್ ನಿವಾಸಿ ಹಿತೇಶ್ ಪಟೇಲ್ ಕೂಡ ಜೂನ್ 12ರಂದು ವೆಂಬ್ಲಿ ಹಿಲ್ ರಸ್ತೆಯಲ್ಲಿ ಪಾನ್ ಉಗುಳಿದ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಅವರಿಗೂ 1,391 ಯುರೋ ದಂಡ ವಿಧಿಸಿದೆ.
ಪಾನ್ ಉಗುಳುವುದರಿಂದ ರಸ್ತೆಗಳಲ್ಲಿ ಉಂಟಾಗುವ ಕಲೆಗಳನ್ನು ತೆರವುಗೊಳಿಸಲು ವರ್ಷಕ್ಕೆ ಸಾವಿರಾರು ಯುರೋ ವೆಚ್ಚವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಂತ್ರಗಳ ಮೂಲಕವೂ ಈ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಕಷ್ಟಕರವಾಗಿದೆ.
ಈ ಹಿನ್ನೆಲೆಯಲ್ಲಿ ಲಂಡನ್ ಕೌನ್ಸಿಲ್ ಕಟ್ಟುನಿಟ್ಟಿನ ಮೇಲ್ವಿಚಾರಣೆ ಜಾರಿಗೊಳಿಸಿದ್ದು, ಅಧಿಕಾರಿಗಳು ಪ್ರತಿದಿನ ಗಸ್ತು ತಿರುಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಉಗುಳುವುದನ್ನು ಕಂಡುಬಂದರೆ ತಕ್ಷಣವೇ ದಂಡ ವಿಧಿಸಲಾಗುತ್ತಿದೆ. ಒಟ್ಟಾರೆ, ಸ್ವಚ್ಛತೆಗೆ ಆದ್ಯತೆ ನೀಡುತ್ತಿರುವ ಲಂಡನ್ ಆಡಳಿತ, ನಿಯಮ ಉಲ್ಲಂಘನೆಗೆ ಶೂನ್ಯ ಸಹಿಷ್ಣುತೆ ತೋರಿಸುತ್ತಿರುವುದು ಸ್ಪಷ್ಟವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm