ಬ್ರೇಕಿಂಗ್ ನ್ಯೂಸ್
22-03-26 03:14 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 22: ಅಮೆರಿಕ- ಇಸ್ರೇಲ್ ದಾಳಿಯಲ್ಲಿ ತನ್ನ ನಟಾಂಜಾ ಪರಮಾಣು ಸ್ಥಾವರವನ್ನು ಗುರಿಯಾಗಿಸಿದ್ದಕ್ಕೆ ಇರಾನ್ ಕೂಡ ಇಸ್ರೇಲ್ ನ್ಯೂಕ್ಲಿಯರ್ ರಿಯಾಕ್ಟರ್ ಗುರಿಯಾಗಿಸಿ ದಾಳಿ ನಡೆಸಿದೆ. ಶನಿವಾರ ರಾತ್ರಿ ಮಿಸೈಲ್ ದಾಳಿ ನಡೆಸಿರುವ ಇರಾನ್, ಇಸ್ರೇಲ್ ನಲ್ಲಿರುವ ಪ್ರಮುಖ ಅಣು ಸ್ಥಾವರ ಡಿಮೋನಾ ಮತ್ತು ಅರಾದ್ ನಲ್ಲಿ ಭಾರೀ ನಷ್ಟ ಉಂಟು ಮಾಡಿದೆ.
ಮುಯ್ಯಿಗೆ ಮುಯ್ಯಿ ಎನ್ನುವಂತೆ ಇರಾನ್, ಡಿಮೋನಾದಲ್ಲಿರುವ ಶಿಮೋನ್ ಪೆರೇಸ್ ನೆಗೆವ್ ನ್ಯೂಕ್ಲಿಯರ್ ರೀಸರ್ಚ್ ಸೆಂಟರ್ ಮತ್ತು ಅರಾದ್ ನ್ಯೂಕ್ಲಿಯರ್ ಘಟಕದ ಮೇಲೆ ದಾಳಿ ನಡೆಸಿದೆ. ಅಲ್ಲಿರುವ ಜನವಸತಿ ಕಟ್ಟಡಗಳು ಮತ್ತು ಇತರ ಕಟ್ಟಡಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಮಿಸೈಲ್ ಅಪ್ಪಳಿಸಿದ್ದು ನೂರಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮಿಸೈಲ್ ವಿರೋಧಿ ವ್ಯವಸ್ಥೆಯ ಹೊರತಾಗಿಯೂ ಎರಡು ಕ್ಷಿಪಣಿಗಳು ಶನಿವಾರ ರಾತ್ರಿ ನೇರವಾಗಿ ಬಂದು ಬಿದ್ದಿದ್ದು ಇಸ್ರೇಲ್ ದೊಡ್ಡ ಮಟ್ಟದ ಹಾನಿ ಅನುಭವಿಸಿದೆ. ಮಾಹಿತಿ ಪ್ರಕಾರ, ಅರಾದ್ ನಲ್ಲಿ 84 ಜನ ಗಾಯಗೊಂಡಿದ್ದು, ಅದರಲ್ಲಿ 10 ಮಂದಿ ತೀವ್ರ ಗಾಯಗೊಂಡಿದ್ದಾರೆ. ಡಿಮೋನಾದಲ್ಲಿ 33 ಮಂದಿ ಗಾಯಗೊಂಡಿದ್ದಾರೆ.
ಕಟ್ಟಡ ಪೂರ್ತಿ ನಾಶಗೊಂಡಿರುವುದರಿಂದ ದೊಡ್ಡ ಮಟ್ಟದ ಹಾನಿಯಾಗಿರುವ ಬಗ್ಗೆ ಶಂಕೆಯಿದೆ. ಮಿಸೈಲ್ ದಾಳಿಯಾಗಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕಾಶದಿಂದ ಬೆಂಕಿಯುಂಡೆ ನುಗ್ಗಿ ಬಂದಿರುವಂತೆ ತೋರಿದೆ. ದಾಳಿ ಘಟನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಈ ದಿನ ಭಾರೀ ಕಷ್ಟದ ಸಂಜೆಯಾಗಿತ್ತು ಎಂದು ಹೇಳಿದ್ದಾರೆ. ತುರ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದು ಜನರು ಭದ್ರತಾ ಪಡೆಗಳ ಸೂಚನೆಯನ್ನು ಪಾಲಿಸಬೇಕೆಂದು ಸೂಚಿಸಿದ್ದಾರೆ. ಇದೇ ವೇಳೆ, ಶತ್ರುಗಳ ಮೇಲಿನ ದಾಳಿಯು ಇನ್ನಷ್ಟು ತೀವ್ರಗೊಳ್ಳಲಿದೆ ಎಂದವರು ಹೇಳಿದ್ದಾರೆ.


ಶನಿವಾರ ಇರಾನ್ ದೇಶದ ಅತಿದೊಡ್ಡ ಪರಮಾಣು ರಿಯಾಕ್ಟರ್ ಇರುವ ನಟಾಂಜ್ ಮೇಲೆ ಅಮೆರಿಕ ದಾಳಿ ನಡೆಸಿತ್ತು. ಯುದ್ಧ ಮೊದಲ್ಗೊಂಡ 22 ದಿನಗಳ ಬಳಿಕ ಮೊದಲ ಬಾರಿಗೆ ಅಮೆರಿಕ ನ್ಯೂಕ್ಲಿಯರ್ ಸ್ಥಾವರಗಳನ್ನು ಗುರಿಯಾಗಿಸಿತ್ತು. ಘಟನೆಯಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದ್ದರೂ, ಅಣು ಸ್ಥಾವರಕ್ಕೆ ಹಾನಿಯಾಗಿಲ್ಲ, ಅದರಿಂದ ವಿಕಿರಣ ಹೊರಬಂದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm