ಬ್ರೇಕಿಂಗ್ ನ್ಯೂಸ್
23-03-26 11:33 am HK News Staffer ದೇಶ - ವಿದೇಶ
ಶ್ರೀನಗರ, ಮಾರ್ಚ್ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಸಂಕಷ್ಟಕ್ಕೀಡಾಗಿರುವ ಇರಾನ್ ದೇಶದ ನಾಗರಿಕರಿಗೆ ನೆರವಾಗಲು ಕಾಶ್ಮೀರದ ಕಣಿವೆ ದೇಣಿಗೆ ಸಂಗ್ರಹಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಇರಾನ್ ಪರವಾಗಿ ನಿಂತಿರುವ ಕಾಶ್ಮೀರಿಗಳ ಔದಾರ್ಯವನ್ನು ಇರಾನ್ ರಾಯಭಾರ ಕಚೇರಿ ಶ್ಲಾಘಿಸಿದೆ.
ಈದ್ ಹಬ್ಬದ ಮರುದಿನವೇ ಕಣಿವೆಯ ಯುವಕರು ಶ್ರೀನಗರದ ವಿವಿಧೆಡೆ, ವಿಶೇಷವಾಗಿ ಶಿಯಾ ಪ್ರಾಬಲ್ಯದ ಬುದ್ಗಾಮ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಮನೆ-ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದರು. ಹಣವಷ್ಟೇ ಅಲ್ಲ, ಚಿನ್ನ-ಬೆಳ್ಳಿಯನ್ನು ಜನರು ದಾನವಾಗಿ ಕೊಟ್ಟಿದ್ದಾರೆ. ಮಹಿಳೆಯರು ತಮ್ಮ ಆಭರಣಗಳನ್ನು, ಗೃಹಬಳಕೆಯ ತಾಮ್ರದ ಪಾತ್ರೆಗಳನ್ನು ಮತ್ತು ಹಲವರು ತಮ್ಮ ಜಾನುವಾರುಗಳನ್ನು ಕೂಡ ಇರಾನ್ ಪರಿಹಾರ ನಿಧಿಗೆ ನೀಡಿದ್ದಾರೆ.
28 ವರ್ಷಗಳ ಹಿಂದೆ ನಿಧನರಾದ ತನ್ನ ಪತಿಯ ನೆನಪಿಗಾಗಿ ಇಟ್ಟುಕೊಂಡಿದ್ದ ಚಿನ್ನದ ಒಡವೆಯೊಂದನ್ನು ಕಾಶ್ಮೀರದ ಮಹಿಳೆಯೊಬ್ಬರು ಇರಾನ್ ಸಂತ್ರಸ್ತರಿಗಾಗಿ ದಾನ ಮಾಡುವ ಮೂಲಕ ಭಾವನಾತ್ಮಕ ಬೆಂಬಲ ಸೂಚಿಸಿದ್ದಾರೆ. ಶಾಲಾ ಮಕ್ಕಳು ತಮ್ಮ ಉಳಿತಾಯದ ಹಣವನ್ನು ಮಾನವೀಯ ಕಾರ್ಯಕ್ಕಾಗಿ ನೀಡಿರುವುದು ವಿಶೇಷವಾಗಿತ್ತು.
ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಈ ದೇಣಿಗೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣ 'X' ನಲ್ಲಿ ಹಂಚಿಕೊಂಡಿದೆ. "ಕಾಶ್ಮೀರದ ಜನರ ಈ ಪ್ರೀತಿ ಮತ್ತು ಮಾನವೀಯತೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಧನ್ಯವಾದಗಳು ಭಾರತ" ಎಂದು ಪೋಸ್ಟ್ ಮಾಡಿದೆ. ಕಾಶ್ಮೀರ ಮತ್ತು ಇರಾನ್ ನಡುವಿನ ದಶಕಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಬಂಧವನ್ನು ಈ ಘಟನೆಯು ಮತ್ತೊಮ್ಮೆ ಸಾಬೀತುಪಡಿಸಿದೆ. ಸಂಗ್ರಹವಾದ ಈ ಎಲ್ಲ ವಸ್ತುಗಳನ್ನು ಅಧಿಕೃತ ಪರಿಹಾರ ಸಂಸ್ಥೆಗಳ ಮೂಲಕ ಇರಾನ್ಗೆ ತಲುಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm