ಬ್ರೇಕಿಂಗ್ ನ್ಯೂಸ್
24-03-26 12:10 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 24: ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಿಂದ ಕಠಿಣ ಬೆದರಿಕೆಗಳು ಹೊರಬಂದಿವೆ. ‘ನಮ್ಮ ವಿದ್ಯುತ್ ಘಟಕಗಳಿಗೆ ದಾಳಿ ಮಾಡಿದರೆ, ನಾವು ಸಹ ಅದನ್ನೇ ಮಾಡುತ್ತೇವೆ. ಕರಾವಳಿ ಮತ್ತು ದ್ವೀಪಗಳನ್ನು ಗುರಿಯಾಗಿಸಿದರೆ, ಪರ್ಶಿಯನ್ ಕೊಲ್ಲಿಯಲ್ಲಿ ಸಮುದ್ರ ಸ್ಫೋಟಕಗಳನ್ನು ಅಳವಡಿಸುತ್ತೇವೆ’ ಎಂದು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ ಸ್ಪಷ್ಟಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಯೊಳಗೆ ಹೋರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಬೆದರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್, “ನಮ್ಮ ವಿದ್ಯುತ್ ಘಟಕಗಳಿಗೆ ಹಾನಿ ಮಾಡಿದರೆ ಪ್ರತಿದಾಳಿ ಖಚಿತ” ಎಂದು ತಿಳಿಸಿದೆ. ಇರಾನ್ ರಕ್ಷಣಾ ಮಂಡಳಿಯು ಕರಾವಳಿ ಮತ್ತು ದ್ವೀಪಗಳ ಮೇಲೆ ದಾಳಿ ಮಾಡಲು ಯತ್ನಿಸಿದರೆ, ಎಲ್ಲಾ ಪ್ರವೇಶ ಮಾರ್ಗಗಳಲ್ಲಿ ಸ್ಫೋಟಕಗಳ ಹಾನಿ ಸಂಭವಿಸಲಿದೆ ಎಂದು ಎಚ್ಚರಿಸಿದೆ.
ಇರಾನ್ ವಿದೇಶಾಂಗ ಇಲಾಖೆ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಘೇರ್ ಈ ಸಂದರ್ಭ ಯಾವುದೇ ಅಮೆರಿಕ–ಇರಾನ್ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದು, ಅಮೆರಿಕದ ಹೇಳಿಕೆ ‘ಇಂಧನ ಬೆಲೆ ನಿಯಂತ್ರಣ ತಂತ್ರ’ ಮಾತ್ರ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ 5 ದಿನದ ಕದನವಿರಾಮ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವಾಲಯ, ‘ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ಯಾವುದೇ ಮಾತುಕತೆಗಳು ನಡೆದಿಲ್ಲ. ಟ್ರಂಪ್ ಅವರ ಹೇಳಿಕೆಯು, ಏರುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡುವ ತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ, ’ಇರಾನ್ನ ಪ್ರತಿದಾಳಿ ಬೆದರಿಕೆಗೆ ಬಗ್ಗಿ ಟ್ರಂಪ್ ಕದನವಿರಾಮದ ಮಾತು ಆಡಿದ್ದಾರೆ’ ಎಂದು ಇರಾನ್ ಸರ್ಕಾರಿ ಟಿವಿ ವರದಿ ಮಾಡಿತ್ತು.
ಈ ನಡುವೆ ಭಾರತೀಯ ಧ್ವಜ ಹೊತ್ತ ಎಲ್ಪಿಜಿ ಹಡಗುಗಳು ಪರ್ಶಿಯನ್ ಕೊಲ್ಲಿಯಿಂದ ಭಾರತಕ್ಕೆ ಪ್ರಯಾಣ ಆರಂಭಿಸಿವೆ. ಲಾರ್ಕ್ ಮತ್ತು ಕೆಶ್ಮ್ ದ್ವೀಪಗಳ ಹತ್ತಿರ ಹಡಗುಗಳು ಸಾಗುತ್ತಿದ್ದು, ಹೋರ್ಮುಜ್ ದಾಟುವ ಮೊದಲು ಇರಾನಿನ ಅಧಿಕಾರಿಗಳಿಗೆ ಗುರುತಿನ ಮಾಹಿತಿ ನೀಡಲು ನಿಧಾನಿಸಬಹುದೆಂದು ತಿಳಿಯುತ್ತಿದೆ. ಶಿವಾಲಿಕ್, ನಂದಾದೇವಿ, ಜಗ್ ಲಾಡ್ಕಿ ಮತ್ತು ಜಗ್ ಪ್ರಕಾಶ್ ಹಡಗುಗಳು ಈಗಾಗಲೇ ಭಾರತದತ್ತ ಸಾಗಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm