ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm