ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am