ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm