ಬ್ರೇಕಿಂಗ್ ನ್ಯೂಸ್
28-03-26 02:58 pm HK News Staffer ದೇಶ - ವಿದೇಶ
ಕಾಠ್ಮಂಡು, ಮಾರ್ಚ್ 28: ನೇಪಾಳದಲ್ಲಿ ಹೊಸತಾಗಿ ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿ ಓಲಿಯನ್ನು ನೇಪಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚಂದ್ರಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್ ಗುರುಂಗ್, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ನೇಪಾಳದಲ್ಲಿ ಯುವಕರ ಕ್ರಾಂತಿ ಭುಗಿಲೆದ್ದಿತ್ತು. ಈ ವೇಳೆ, ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm