ಬ್ರೇಕಿಂಗ್ ನ್ಯೂಸ್
30-03-26 10:31 pm HK News Desk ದೇಶ - ವಿದೇಶ
ನವದೆಹಲಿ, ಮಾರ್ಚ್ 30: ಗಲ್ಫ್ ಯುದ್ಧದಿಂದಾಗಿ ದಿನೇ ದಿನೇ ಡಾಲರ್ ಮುಂದೆ ಕುಸಿಯುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 1 ಡಾಲರ್ ಎದುರು 95 ರೂ. ಗಡಿಯನ್ನು ದಾಟಿದೆ.
ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆಯಲು ಮಾರ್ಚ್ 27ರಂದು ಎಲ್ಲ ಬ್ಯಾಂಕುಗಳು ಪ್ರತಿ ವ್ಯವಹಾರದ ದಿನದ ಅಂತ್ಯಕ್ಕೆ ತಮ್ಮ Net Open Position in Rupee – NOP-INR ಗರಿಷ್ಠ 100 ಮಿಲಿಯನ್ ಡಾಲರ್ಗೆ ಮಿತಿಗೊಳಿಸಬೇಕು ಎಂದು ಆರ್ ಬಿಐ ನಿರ್ದೇಶನ ನೀಡಿತ್ತು. ಈ ಹೊಸ ನಿಯಮವನ್ನು ಪಾಲಿಸಲು ಬ್ಯಾಂಕ್ಗಳಿಗೆ ಏಪ್ರಿಲ್ 10 ರ ವರೆಗೆ ಗಡುವು ನೀಡಲಾಗಿದೆ.
ಆರ್ಬಿಐ ಈ ನಿರ್ಧಾರದ ಬೆನ್ನಲ್ಲೇ ರೂಪಾಯಿ ಮೌಲ್ಯ ಇಂದು ಬೆಳಗ್ಗೆ ಸುಮಾರು 1 ರೂಪಾಯಿ 30 ಪೈಸೆ ಏರಿಕೆಯಾಗಿ 93.59 ಕ್ಕೆ ತಲುಪಿತ್ತು. ಬೆಳಗ್ಗೆ ಏರಿಕೆಯಾಗಿದ್ದರೆ ನಂತರ ರೂಪಾಯಿ ಮೌಲ್ಯ ಕುಸಿಯುತ್ತ ಹೋಯಿತು. ಮಧ್ಯಾಹ್ನ 3 ಗಂಟೆಯ ವೇಳೆಗೆ 1 ಡಾಲರ್ ಮುಂದೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಸಂಜೆಯ ವೇಳೆಗೆ ರೂಪಾಯಿ ಮೌಲ್ಯ ಕುಸಿದು 95ಕ್ಕೆ ತಲುಪಿದ್ದು ಈ ಮಟ್ಟಿಗೆ ಕುಸಿದಿರುವುದು ಇದೇ ಮೊದಲು.
ಈ ಹಿಂದೆ ಬ್ಯಾಂಕ್ಗಳ ಆಡಳಿತ ಮಂಡಳಿಗಳೇ ತಮ್ಮ ಬಂಡವಾಳದ 25% ವರೆಗೆ ಈ ಮಿತಿಯನ್ನು ನಿಗದಿಪಡಿಸಿಕೊಳ್ಳಲು ಅವಕಾಶವಿತ್ತು. ಇದರಿಂದ ದೊಡ್ಡ ಬ್ಯಾಂಕ್ಗಳು ಶತಕೋಟಿ ಡಾಲರ್ಗಳ ವರೆಗೆ ವಹಿವಾಟು ನಡೆಸುತ್ತಿದ್ದವು. ಈಗ ಎಲ್ಲಾ ಬ್ಯಾಂಕ್ಗಳಿಗೂ ಸಮಾನವಾಗಿ 100 ದಶಲಕ್ಷ ಡಾಲರ್ನ ಕಠಿಣ ಮಿತಿಯನ್ನು ಹೇರಲಾಗಿದೆ. ಇದರ ಅರ್ಥ ಒಂದು ಬ್ಯಾಂಕ್ ತನ್ನಲ್ಲಿ ಇಟ್ಟುಕೊಳ್ಳಬಹುದಾದ ಒಟ್ಟು ವಿದೇಶಿ ಕರೆನ್ಸಿಯ (ಮುಖ್ಯವಾಗಿ ಡಾಲರ್) ನಿವ್ವಳ ಮೌಲ್ಯವು ದಿನದ ಅಂತ್ಯಕ್ಕೆ 100 ಮಿಲಿಯನ್ ಡಾಲರ್ ದಾಟುವಂತಿಲ್ಲ.
ಮಿತಿಯನ್ನು ನಿಗದಿ ಪಡಿಸಿದ್ದರಿಂದ ಬ್ಯಾಂಕ್ಗಳು ತಮ್ಮಲ್ಲಿರುವ ಹೆಚ್ಚುವರಿ ಡಾಲರ್ಗಳನ್ನು ಮಾರಾಟ ಮಾಡಬೇಕಾಗುತ್ತದೆ. ಈ ನಿರ್ಧಾರದಿಂದ ಮಾರುಕಟ್ಟೆಯಲ್ಲಿ ಡಾಲರ್ ಪೂರೈಕೆ ಹೆಚ್ಚಾಗಿ ರೂಪಾಯಿ ಮೌಲ್ಯ ಸ್ಥಿರಗೊಳ್ಳಬಹುದು ಎಂಬ ಲೆಕ್ಕಾಚಾರ ಆರ್ಬಿಐನದ್ದು.
ಆದರೆ, ಈ ಹಠಾತ್ ಬದಲಾವಣೆಯಿಂದ ಬ್ಯಾಂಕ್ಗಳಿಗೆ ಅಲ್ಪಾವಧಿಯ ನಷ್ಟ ಉಂಟಾಗಬಹುದು ಎಂದು ಆತಂಕ ವ್ಯಕ್ತವಾಗಿದೆ. ಬ್ಯಾಂಕುಗಳು ಏಪ್ರಿಲ್ 10 ರೊಳಗೆ ಈ ಮಿತಿಯನ್ನು ತಲುಪಬೇಕಿರುವುದರಿಂದ ಸುಮಾರು 18 ಶತಕೋಟಿ ಡಾಲರ್ನಿಂದ 30 ಶತಕೋಟಿ ಡಾಲರ್ವರೆಗಿನ ಹೆಚ್ಚುವರಿ ಡಾಲರ್ಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕಾಗುತ್ತದೆ. ಇದರಿಂದಾಗಿ ಪರೋಕ್ಷವಾಗಿ ರುಪಾಯಿ ಮೌಲ್ಯ ಕುಸಿಯತೊಡಗಿದೆ ಎನ್ನಲಾಗುತ್ತಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am