ಬ್ರೇಕಿಂಗ್ ನ್ಯೂಸ್
31-03-26 03:30 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಮಾರ್ಚ್ 31: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢ ರೀತಿಯಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಅಂತ್ಯಕ್ರಿಯೆ ಜೈಶ್ ಉಗ್ರರ ತಾಣ ಬಹಾವಲ್ಪುರದಲ್ಲಿ ನಡೆದಿದೆ.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಐವರು ಸಹೋದರರಿದ್ದು ತಾಹಿರ್ ಅನ್ವರ್ ಹಿರಿಯ ಸೋದರ. ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತಾಹಿರ್ ಈಗ ನಿಗೂಢವಾಗಿ ಸಾವನ್ನಪ್ಪಿದ್ದಾನೆ, ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿರುವ ಹಲವರನ್ನು ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತಾಹಿರ್ ಸಾವಿನ ಬಗ್ಗೆ ವಿವಿಧ ರೀತಿಯ ಊಹಾಪೋಹಗಳು ಹರಡುತ್ತಿವೆ. ಆತನ ಮೇಲೆ ದಾಳಿ ನಡೆದಿದೆಯೇ ಎನ್ನುವ ಬಗ್ಗೆ ದೃಢ ಮಾಹಿತಿ ಲಭ್ಯವಿಲ್ಲ.
ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಭಾರತದ ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆತನ ಸಹೋದರಿ, ಸೋದರಳಿಯ ಹಾಗೂ ಹತ್ತಿರದ ಕುಟುಂಬ ಸದಸ್ಯರು ಸೇರಿದ್ದಾರೆ.
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ 2001ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳನ್ನು ನಡೆಸಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದರ ಮುಖ್ಯಸ್ಥ ಮಸೂದ್ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿದ್ದರೂ, ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಆತನ ಆರೋಗ್ಯ ಬಗ್ಗೆ ವದಂತಿಗಳು ಹರಡುತ್ತಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm