ಬ್ರೇಕಿಂಗ್ ನ್ಯೂಸ್
31-03-26 11:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 31: ಯುದ್ಧ ವಿರಾಮ ಘೋಷಣೆ ನಡುವೆಯೂ ಅಮೆರಿಕ- ಇಸ್ರೇಲ್ ಇರಾನ್ ದೇಶದ ರಾಜಧಾನಿ ಟೆಹ್ರಾನ್ ಮತ್ತು ಪರಮಾಣು ಸ್ಥಾವರಗಳಿರುವ ಇಶ್ಫಹಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪ್ರತಿಯಾಗಿ ಇರಾನಿನ ಐಆರ್ ಜಿಸಿ ಪಡೆ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡುವುದಾಗಿ ಬೆದರಿಕೆ ಹಾಕಿದೆ.
ಅಮೆರಿಕ ತಾಂತ್ರಿಕ ದೈತ್ಯ ಕಂಪನಿಗಳಾದ ಮೈಕ್ರೋಸಾಫ್ಟ್, ಗೂಗಲ್, ಏಪಲ್, ಇಂಟೆಲ್, ಬೋಯಿಂಗ್ ಸೇರಿದಂತೆ 18 ಬಹು ರಾಷ್ಟ್ರೀಯ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿಕೊಂಡಿದ್ದು, ಕೂಡಲೇ ಅದರಲ್ಲಿರುವ ಉದ್ಯೋಗಿಗಳು ಕಚೇರಿ ತೊರೆಯುವಂತೆ ಸೂಚನೆ ನೀಡಿದೆ. ಎಪ್ರಿಲ್ 1ರಂದೇ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸೌದಿ, ದುಬೈನಲ್ಲಿರುವ ಅಮೆರಿಕದ ಕಂಪನಿಗಳಿಗೆ ನಡುಕ ಶುರುವಾಗಿದೆ.
ಅಲ್ಲದೆ, ಅಮೆರಿಕ- ಇಸ್ರೇಲ್ ದಾಳಿಯನ್ನು ಭಯೋತ್ಪಾದಕ ದಾಳಿಯೆಂದು ಐಆರ್ ಜಿಸಿ ಹೇಳಿದ್ದು, ಇವರ ಪ್ರತಿ ದಾಳಿಗೂ ಪ್ರತಿಯಾಗಿ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡಲಾಗುವುದು ಎಂದು ಹೇಳಿದೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಫಾರ್ಮಾ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಖಂಡಿಸಿದ್ದು, ಇಸ್ರೇಲ್ ಯುದ್ಧಾಪರಾಧವನ್ನು ಮಾಡುತ್ತಿದ್ದು ಫಾರ್ಮಾ ಕಂಪನಿಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಅವರ ಗುರಿ ಕ್ಲೀಯರ್ ಆಗಿ ಕಾಣುತ್ತಿದೆ ಎಂದಿದ್ದಾರೆ.
ಇದೇ ವೇಳೆ, ಪಾಕಿಸ್ತಾನ ಮತ್ತು ಚೀನಾವು ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆ ಮಾತುಕತೆ ನಡೆಸುವಂತೆ ಆಗ್ರಹಿಸಿವೆ. ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ತಾವು ಜೊತೆಯಾಗುವುದಾಗಿ ಜಂಟಿ ಹೇಳಿಕೆ ನೀಡಿವೆ. ಇದೇ ವೇಳೆ ಅಮೆರಿಕದಲ್ಲಿ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಅಧ್ಯಕ್ಷ ಟ್ರಂಪ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ದೇಶಾದ್ಯಂತ ಕಳೆದ 3-4 ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm