ಬ್ರೇಕಿಂಗ್ ನ್ಯೂಸ್
31-03-26 11:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 31: ಯುದ್ಧ ವಿರಾಮ ಘೋಷಣೆ ನಡುವೆಯೂ ಅಮೆರಿಕ- ಇಸ್ರೇಲ್ ಇರಾನ್ ದೇಶದ ರಾಜಧಾನಿ ಟೆಹ್ರಾನ್ ಮತ್ತು ಪರಮಾಣು ಸ್ಥಾವರಗಳಿರುವ ಇಶ್ಫಹಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪ್ರತಿಯಾಗಿ ಇರಾನಿನ ಐಆರ್ ಜಿಸಿ ಪಡೆ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡುವುದಾಗಿ ಬೆದರಿಕೆ ಹಾಕಿದೆ.
ಅಮೆರಿಕ ತಾಂತ್ರಿಕ ದೈತ್ಯ ಕಂಪನಿಗಳಾದ ಮೈಕ್ರೋಸಾಫ್ಟ್, ಗೂಗಲ್, ಏಪಲ್, ಇಂಟೆಲ್, ಬೋಯಿಂಗ್ ಸೇರಿದಂತೆ 18 ಬಹು ರಾಷ್ಟ್ರೀಯ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿಕೊಂಡಿದ್ದು, ಕೂಡಲೇ ಅದರಲ್ಲಿರುವ ಉದ್ಯೋಗಿಗಳು ಕಚೇರಿ ತೊರೆಯುವಂತೆ ಸೂಚನೆ ನೀಡಿದೆ. ಎಪ್ರಿಲ್ 1ರಂದೇ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸೌದಿ, ದುಬೈನಲ್ಲಿರುವ ಅಮೆರಿಕದ ಕಂಪನಿಗಳಿಗೆ ನಡುಕ ಶುರುವಾಗಿದೆ.
ಅಲ್ಲದೆ, ಅಮೆರಿಕ- ಇಸ್ರೇಲ್ ದಾಳಿಯನ್ನು ಭಯೋತ್ಪಾದಕ ದಾಳಿಯೆಂದು ಐಆರ್ ಜಿಸಿ ಹೇಳಿದ್ದು, ಇವರ ಪ್ರತಿ ದಾಳಿಗೂ ಪ್ರತಿಯಾಗಿ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡಲಾಗುವುದು ಎಂದು ಹೇಳಿದೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಫಾರ್ಮಾ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಖಂಡಿಸಿದ್ದು, ಇಸ್ರೇಲ್ ಯುದ್ಧಾಪರಾಧವನ್ನು ಮಾಡುತ್ತಿದ್ದು ಫಾರ್ಮಾ ಕಂಪನಿಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಅವರ ಗುರಿ ಕ್ಲೀಯರ್ ಆಗಿ ಕಾಣುತ್ತಿದೆ ಎಂದಿದ್ದಾರೆ.
ಇದೇ ವೇಳೆ, ಪಾಕಿಸ್ತಾನ ಮತ್ತು ಚೀನಾವು ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆ ಮಾತುಕತೆ ನಡೆಸುವಂತೆ ಆಗ್ರಹಿಸಿವೆ. ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ತಾವು ಜೊತೆಯಾಗುವುದಾಗಿ ಜಂಟಿ ಹೇಳಿಕೆ ನೀಡಿವೆ. ಇದೇ ವೇಳೆ ಅಮೆರಿಕದಲ್ಲಿ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಅಧ್ಯಕ್ಷ ಟ್ರಂಪ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ದೇಶಾದ್ಯಂತ ಕಳೆದ 3-4 ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm