ಬ್ರೇಕಿಂಗ್ ನ್ಯೂಸ್
01-04-26 11:03 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 1: ಇರಾನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದಲ್ಲಿಯೇ ಒತ್ತಡ ಕೇಳಿಬರುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಹಲವು ದೇಶಗಳು ಕೂಡ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದೇ ವೇಳೆ, ಯುದ್ಧದಿಂದಾಗಿ ಅಮೆರಿಕಕ್ಕೆ ಭಾರೀ ನಷ್ಟವೂ ಉಂಟಾಗಿದ್ದು ಇದು ಅಮೆರಿಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದರ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಅಧ್ಯಕ್ಷರೇ ಅಮೆರಿಕದ ಬಳಿ ಕದನ ವಿರಾಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಟ್ರಂಪ್ ಮಾತನ್ನು ಇರಾನ್ ಸ್ಪಷ್ಟವಾಗಿ ತಳ್ಳಿಹಾಕಿದೆ. ‘ಟ್ರೂತ್ ಸೋಷಿಯಲ್’ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ಇರಾನ್ ಹೊಸ ಆಡಳಿತ ಹಿಂದಿನವರಿಗಿಂತ ಹೆಚ್ಚು ಬುದ್ಧಿವಂತವಾಗಿದ್ದು, ಅಮೆರಿಕದ ಬಳಿ ಯುದ್ಧ ವಿರಾಮವನ್ನು ಕೇಳುತ್ತಿದೆ ಎಂದು ಹೇಳಿದ್ದಾರೆ. ಆದರೆ ಹೋರ್ಮುಜ್ ಜಲಸಂಧಿಯನ್ನು ಎಲ್ಲ ದೇಶಗಳಿಗೆ, ಸ್ವತಂತ್ರವಾಗಿ ಪುನರ್ ಆರಂಭಿಸಿದ ಬಳಿಕ ಮಾತ್ರ ಅಮೆರಿಕ ಕದನ ವಿರಾಮವನ್ನು ಪರಿಗಣಿಸುತ್ತದೆ ಎಂಬ ಶರತ್ತನ್ನೂ ಮುಂದಿಟ್ಟಿದ್ದಾರೆ.
“ಹೋರ್ಮುಜ್ ಜಲಸಂಧಿ ಮುಕ್ತಗೊಳ್ಳುವ ವರೆಗೆ ನಾವು ಕಾಯುತ್ತೇವೆ. ಇಲ್ಲವಾದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶ ಮಾಡುವುದಕ್ಕಾಗಲಿ, ಅಥವಾ ಶಿಲಾಯುಗಕ್ಕೆ ಹಿಂದಕ್ಕೆ ತಳ್ಳುವವರೆಗೆ ನಾವು ಮುಂದುವರೆಯುತ್ತೇವೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯಲ್ಲಿ, ಇರಾನ್ ಯಾವುದೇ ರೀತಿಯ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ನಮ್ಮ ರಕ್ಷಣೆಗೆ ಯಾವುದೇ ಗಡುವು ಇಡುವುದಿಲ್ಲ. ಬೆದರಿಕೆ ಭಾಷೆಯಲ್ಲಿ ಯಾರೂ ಇರಾನ್ ಜನರೊಂದಿಗೆ ಮಾತನಾಡಲು ಸಾಧ್ಯವಿಲ್ಲ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅಮೆರಿಕದೊಂದಿಗೆ ಮಾತುಕತೆಗಳಿಂದ ಫಲಿತಾಂಶ ಸಿಗುತ್ತದೆ ಎಂಬ ವಿಶ್ವಾಸವೇ ಇಲ್ಲ. ವಿಶ್ವಾಸದ ಮಟ್ಟ ಶೂನ್ಯವಾಗಿದೆ ಎಂದವರು ಹೇಳಿದ್ದಾರೆ.
ಭೂಯುದ್ಧದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, “ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಯಾವುದೇ ಭೂ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲೆವು ಎಂದಿದ್ದಾರೆ. ಅಲ್ಲದೆ, ನಮ್ಮ ಷರತ್ತುಗಳು ಸ್ಪಷ್ಟವಾಗಿವೆ. ನಾವು ಯುದ್ಧ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm