ಬ್ರೇಕಿಂಗ್ ನ್ಯೂಸ್
01-04-26 11:03 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 1: ಇರಾನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದಲ್ಲಿಯೇ ಒತ್ತಡ ಕೇಳಿಬರುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಹಲವು ದೇಶಗಳು ಕೂಡ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದೇ ವೇಳೆ, ಯುದ್ಧದಿಂದಾಗಿ ಅಮೆರಿಕಕ್ಕೆ ಭಾರೀ ನಷ್ಟವೂ ಉಂಟಾಗಿದ್ದು ಇದು ಅಮೆರಿಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದರ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಅಧ್ಯಕ್ಷರೇ ಅಮೆರಿಕದ ಬಳಿ ಕದನ ವಿರಾಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಟ್ರಂಪ್ ಮಾತನ್ನು ಇರಾನ್ ಸ್ಪಷ್ಟವಾಗಿ ತಳ್ಳಿಹಾಕಿದೆ. ‘ಟ್ರೂತ್ ಸೋಷಿಯಲ್’ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ಇರಾನ್ ಹೊಸ ಆಡಳಿತ ಹಿಂದಿನವರಿಗಿಂತ ಹೆಚ್ಚು ಬುದ್ಧಿವಂತವಾಗಿದ್ದು, ಅಮೆರಿಕದ ಬಳಿ ಯುದ್ಧ ವಿರಾಮವನ್ನು ಕೇಳುತ್ತಿದೆ ಎಂದು ಹೇಳಿದ್ದಾರೆ. ಆದರೆ ಹೋರ್ಮುಜ್ ಜಲಸಂಧಿಯನ್ನು ಎಲ್ಲ ದೇಶಗಳಿಗೆ, ಸ್ವತಂತ್ರವಾಗಿ ಪುನರ್ ಆರಂಭಿಸಿದ ಬಳಿಕ ಮಾತ್ರ ಅಮೆರಿಕ ಕದನ ವಿರಾಮವನ್ನು ಪರಿಗಣಿಸುತ್ತದೆ ಎಂಬ ಶರತ್ತನ್ನೂ ಮುಂದಿಟ್ಟಿದ್ದಾರೆ.
“ಹೋರ್ಮುಜ್ ಜಲಸಂಧಿ ಮುಕ್ತಗೊಳ್ಳುವ ವರೆಗೆ ನಾವು ಕಾಯುತ್ತೇವೆ. ಇಲ್ಲವಾದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶ ಮಾಡುವುದಕ್ಕಾಗಲಿ, ಅಥವಾ ಶಿಲಾಯುಗಕ್ಕೆ ಹಿಂದಕ್ಕೆ ತಳ್ಳುವವರೆಗೆ ನಾವು ಮುಂದುವರೆಯುತ್ತೇವೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯಲ್ಲಿ, ಇರಾನ್ ಯಾವುದೇ ರೀತಿಯ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ನಮ್ಮ ರಕ್ಷಣೆಗೆ ಯಾವುದೇ ಗಡುವು ಇಡುವುದಿಲ್ಲ. ಬೆದರಿಕೆ ಭಾಷೆಯಲ್ಲಿ ಯಾರೂ ಇರಾನ್ ಜನರೊಂದಿಗೆ ಮಾತನಾಡಲು ಸಾಧ್ಯವಿಲ್ಲ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅಮೆರಿಕದೊಂದಿಗೆ ಮಾತುಕತೆಗಳಿಂದ ಫಲಿತಾಂಶ ಸಿಗುತ್ತದೆ ಎಂಬ ವಿಶ್ವಾಸವೇ ಇಲ್ಲ. ವಿಶ್ವಾಸದ ಮಟ್ಟ ಶೂನ್ಯವಾಗಿದೆ ಎಂದವರು ಹೇಳಿದ್ದಾರೆ.
ಭೂಯುದ್ಧದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, “ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಯಾವುದೇ ಭೂ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲೆವು ಎಂದಿದ್ದಾರೆ. ಅಲ್ಲದೆ, ನಮ್ಮ ಷರತ್ತುಗಳು ಸ್ಪಷ್ಟವಾಗಿವೆ. ನಾವು ಯುದ್ಧ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm