ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm