ಬ್ರೇಕಿಂಗ್ ನ್ಯೂಸ್
02-04-26 10:24 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆಯೂ ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಭಾರತೀಯ ಹಡಗುಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇರಾನ್ ಮತ್ತೊಮ್ಮೆ ಭರವಸೆ ನೀಡಿದೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದ್ದು, ಪ್ರಸ್ತುತ ಸಂಘರ್ಷದ ಪರಿಸ್ಥಿತಿಯಲ್ಲಿಯೂ ಭಾರತೀಯರು ತೈಲದ ಕಾರಣಕ್ಕೆ ಭಯಕ್ಕೀಡಾಗುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಪ್ರಮುಖ ಮತ್ತು ಕಿರಿದಾದ ಜಲಮಾರ್ಗಗಳಲ್ಲಿ ಒಂದಾಗಿದ್ದು, ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿಯೊಂದಿಗೆ ಸಂಪರ್ಕಿಸುವುದರ ಜೊತೆಗೆ ಅರೇಬಿಯನ್ ಸಮುದ್ರಕ್ಕೆ ದಾರಿ ಮಾಡಿಕೊಡುತ್ತದೆ. ಈ ಮಾರ್ಗವು ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖ ಕೇಂದ್ರವಾಗಿದ್ದು, ವಿಶ್ವದ ಸುಮಾರು ಶೇಕಡಾ 20ರಷ್ಟು ಇಂಧನ ಸಾಗಾಟ ಇದೇ ಮಾರ್ಗದಲ್ಲಿ ನಡೆಯುತ್ತದೆ.
ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಗಳ ನಂತರ ಹಾರ್ಮುಜ್ ಜಲಸಂಧಿಯಲ್ಲಿ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಅಮೆರಿಕ ಹೊರತಾಗಿ ಕೆಲವೇ ದೇಶಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡುತ್ತಿದೆ. ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹ ಪರ ರಾಷ್ಟ್ರಗಳಿಗೆ ಹಾರ್ಮುಜ್ ಮೂಲಕ ಹಾದುಹೋಗಲು ಅವಕಾಶ ನೀಡಿರುವುದಾಗಿ ಇರಾನ್ ಹೇಳಿದೆ.
“ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಯಲ್ಲಿದ್ದಾರೆ. ಚಿಂತಿಸಬೇಡಿ ಎಂದು ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ನೀಡಿದೆ. ಇದೇ ವೇಳೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವಾಲಯವು ಗಲ್ಫ್ ಪ್ರದೇಶದ ಪರಿಸ್ಥಿತಿಯನ್ನು ನಿಗಾದಲ್ಲಿಟ್ಟು, ಭಾರತೀಯ ನಾಗರಿಕರು ಮತ್ತು ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇರಾನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಹಲವು ದೇಶಗಳಿಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯಲ್ಲಿ ಸವಾಲುಗಳು ಎದುರಾಗಿವೆ. ಆದಾಗ್ಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಯಾವುದೇ ಅಪಾಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿರುವುದು ಸ್ವಲ್ಪ ಮಟ್ಟಿಗೆ ಆತಂಕ ಕಡಿಮೆ ಮಾಡುವಂತಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm