ಬ್ರೇಕಿಂಗ್ ನ್ಯೂಸ್
02-04-26 10:24 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆಯೂ ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಭಾರತೀಯ ಹಡಗುಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇರಾನ್ ಮತ್ತೊಮ್ಮೆ ಭರವಸೆ ನೀಡಿದೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದ್ದು, ಪ್ರಸ್ತುತ ಸಂಘರ್ಷದ ಪರಿಸ್ಥಿತಿಯಲ್ಲಿಯೂ ಭಾರತೀಯರು ತೈಲದ ಕಾರಣಕ್ಕೆ ಭಯಕ್ಕೀಡಾಗುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಪ್ರಮುಖ ಮತ್ತು ಕಿರಿದಾದ ಜಲಮಾರ್ಗಗಳಲ್ಲಿ ಒಂದಾಗಿದ್ದು, ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿಯೊಂದಿಗೆ ಸಂಪರ್ಕಿಸುವುದರ ಜೊತೆಗೆ ಅರೇಬಿಯನ್ ಸಮುದ್ರಕ್ಕೆ ದಾರಿ ಮಾಡಿಕೊಡುತ್ತದೆ. ಈ ಮಾರ್ಗವು ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖ ಕೇಂದ್ರವಾಗಿದ್ದು, ವಿಶ್ವದ ಸುಮಾರು ಶೇಕಡಾ 20ರಷ್ಟು ಇಂಧನ ಸಾಗಾಟ ಇದೇ ಮಾರ್ಗದಲ್ಲಿ ನಡೆಯುತ್ತದೆ.
ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಗಳ ನಂತರ ಹಾರ್ಮುಜ್ ಜಲಸಂಧಿಯಲ್ಲಿ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಅಮೆರಿಕ ಹೊರತಾಗಿ ಕೆಲವೇ ದೇಶಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡುತ್ತಿದೆ. ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹ ಪರ ರಾಷ್ಟ್ರಗಳಿಗೆ ಹಾರ್ಮುಜ್ ಮೂಲಕ ಹಾದುಹೋಗಲು ಅವಕಾಶ ನೀಡಿರುವುದಾಗಿ ಇರಾನ್ ಹೇಳಿದೆ.
“ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಯಲ್ಲಿದ್ದಾರೆ. ಚಿಂತಿಸಬೇಡಿ ಎಂದು ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ನೀಡಿದೆ. ಇದೇ ವೇಳೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವಾಲಯವು ಗಲ್ಫ್ ಪ್ರದೇಶದ ಪರಿಸ್ಥಿತಿಯನ್ನು ನಿಗಾದಲ್ಲಿಟ್ಟು, ಭಾರತೀಯ ನಾಗರಿಕರು ಮತ್ತು ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇರಾನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಹಲವು ದೇಶಗಳಿಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯಲ್ಲಿ ಸವಾಲುಗಳು ಎದುರಾಗಿವೆ. ಆದಾಗ್ಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಯಾವುದೇ ಅಪಾಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿರುವುದು ಸ್ವಲ್ಪ ಮಟ್ಟಿಗೆ ಆತಂಕ ಕಡಿಮೆ ಮಾಡುವಂತಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm