ಬ್ರೇಕಿಂಗ್ ನ್ಯೂಸ್
06-04-26 06:09 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ನವದೆಹಲಿ- ಟೆಲ್ ಅವೀವ್ ಮಾರ್ಗದಲ್ಲಿ ಮೇ 31ರ ವರೆಗೂ ವಿಮಾನ ಯಾನವನ್ನು ಸ್ಥಗಿತಗೊಳಿಸಿದೆ.
ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲಿ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ನಡುವೆಯೂ ಕಾರ್ಯ ನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮುಖ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನ ಸಂಚಾರ ಸ್ಥಗಿತ ಚಿಂತೆಗೀಡು ಮಾಡಿದೆ. ಇಸ್ರೇಲ್ ತೊರೆಯಲು ಬಯಸುವ ಭಾರತೀಯರು ಜೋರ್ಡಾನ್ ಅಥವಾ ಈಜಿಪ್ಟ್ ಮೂಲಕ ಎರಡು ದೇಶಗಳ ಭೂ ಗಡಿ ದಾಟುವ ಮೂಲಕ ಪ್ರವೇಶಿಸಬೇಕು. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವಿಧ ಮಾರ್ಗಗಳ ಮೂಲಕ ಭಾರತಕ್ಕೆ ತೆರಳಲು ನೆರವು ನೀಡುತ್ತಿದೆ. ಇದೇ ವೇಳೆ, ರಾಯಭಾರ ಕಚೇರಿ ಭಾರತೀಯ ಸಮುದಾಯದೊಂದಿಗೆ ನಿಯಮಿತ ಸಂಪರ್ಕವನ್ನು ಹೊಂದಿದ್ದು, 24x7 ತುರ್ತು ಸಹಾಯವಾಣಿ ತೆರೆದಿದೆ ಮತ್ತು ಬೃಹತ್ ನೋಂದಣಿ ಕಾರ್ಯವನ್ನು ಸಹ ಪ್ರಾರಂಭಿಸಿದೆ.
ಇದೇ ವೇಳೆ, ಭಾರತದ ಇಸ್ರೇಲ್ ರಾಯಭಾರಿ ಜೆಪಿ ಸಿಂಗ್ ಮತ್ತು ಸಿಬಂದಿ ಇಸ್ರೇಲ್ನಲ್ಲಿರುವ ಭಾರತೀಯರ ಸಮಸ್ಯೆ ಆಲಿಸಲು ವರ್ಚುವಲ್ ಚರ್ಚೆಯನ್ನು ನಡೆಸಿತು. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಅದರಾಚೆಗೂ ಅವರಿಗೆ ನಿರಂತರ ಬೆಂಬಲದ ಭರವಸೆ ನೀಡಿದೆ ಎಂದು ಮಿಷನ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm