ಬ್ರೇಕಿಂಗ್ ನ್ಯೂಸ್
06-04-26 06:09 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ನವದೆಹಲಿ- ಟೆಲ್ ಅವೀವ್ ಮಾರ್ಗದಲ್ಲಿ ಮೇ 31ರ ವರೆಗೂ ವಿಮಾನ ಯಾನವನ್ನು ಸ್ಥಗಿತಗೊಳಿಸಿದೆ.
ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲಿ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ನಡುವೆಯೂ ಕಾರ್ಯ ನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮುಖ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನ ಸಂಚಾರ ಸ್ಥಗಿತ ಚಿಂತೆಗೀಡು ಮಾಡಿದೆ. ಇಸ್ರೇಲ್ ತೊರೆಯಲು ಬಯಸುವ ಭಾರತೀಯರು ಜೋರ್ಡಾನ್ ಅಥವಾ ಈಜಿಪ್ಟ್ ಮೂಲಕ ಎರಡು ದೇಶಗಳ ಭೂ ಗಡಿ ದಾಟುವ ಮೂಲಕ ಪ್ರವೇಶಿಸಬೇಕು. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವಿಧ ಮಾರ್ಗಗಳ ಮೂಲಕ ಭಾರತಕ್ಕೆ ತೆರಳಲು ನೆರವು ನೀಡುತ್ತಿದೆ. ಇದೇ ವೇಳೆ, ರಾಯಭಾರ ಕಚೇರಿ ಭಾರತೀಯ ಸಮುದಾಯದೊಂದಿಗೆ ನಿಯಮಿತ ಸಂಪರ್ಕವನ್ನು ಹೊಂದಿದ್ದು, 24x7 ತುರ್ತು ಸಹಾಯವಾಣಿ ತೆರೆದಿದೆ ಮತ್ತು ಬೃಹತ್ ನೋಂದಣಿ ಕಾರ್ಯವನ್ನು ಸಹ ಪ್ರಾರಂಭಿಸಿದೆ.
ಇದೇ ವೇಳೆ, ಭಾರತದ ಇಸ್ರೇಲ್ ರಾಯಭಾರಿ ಜೆಪಿ ಸಿಂಗ್ ಮತ್ತು ಸಿಬಂದಿ ಇಸ್ರೇಲ್ನಲ್ಲಿರುವ ಭಾರತೀಯರ ಸಮಸ್ಯೆ ಆಲಿಸಲು ವರ್ಚುವಲ್ ಚರ್ಚೆಯನ್ನು ನಡೆಸಿತು. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಅದರಾಚೆಗೂ ಅವರಿಗೆ ನಿರಂತರ ಬೆಂಬಲದ ಭರವಸೆ ನೀಡಿದೆ ಎಂದು ಮಿಷನ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm