ಬ್ರೇಕಿಂಗ್ ನ್ಯೂಸ್
06-04-26 06:16 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 6: ಅಮೆರಿಕ ಮತ್ತು ಇರಾನ್ ನಡುವಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅಮೆರಿಕ ಇರಾನ್ಗೆ ನೀಡಿದ 10 ದಿನಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ ಕೊನೆಗೊಳ್ಳಲಿದೆ. ಈ ಮಧ್ಯೆ ಟ್ರಂಪ್, “ಜಲಸಂಧಿ ತೆರೆಯಿರಿ, ಇಲ್ಲದಿದ್ದರೆ ಭೀಕರ ಪರಿಣಾಮಕ್ಕೆ ಸಿದ್ಧರಾಗಿ” ಎಂದು ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.
ಆದರೆ ಡೊನಾಲ್ಡ್ ಟ್ರಂಪ್ ಬೆದರಿಕೆಗೆ ಕ್ಯಾರೆನ್ನದ ಇರಾನ್, ಈವರೆಗಿನ ಯುದ್ಧದಿಂದ ಆಗಿರುವ ನಷ್ಟವನ್ನು ತುಂಬಿಕೊಡುವಂತೆ ಷರತ್ತು ವಿಧಿಸುವ ಮೂಲಕ ತಿರುಗೇಟು ನೀಡಿದೆ. ಇದರಿಂದ ಪ್ರದೇಶದಲ್ಲಿ ಇನ್ನೇನು ಅನಾಹುತ ಆಗುತ್ತೋ ಎನ್ನುವ ಆತಂಕ ಎದುರಾಗಿದೆ.
ಇದೇ ವೇಳೆ, ದಕ್ಷಿಣ ಇಸ್ರೇಲ್ನಲ್ಲಿ ಡಿಮೋನಾ ಪೆಟ್ರೋಕೆಮಿಕಲ್ ಸೌಲಭ್ಯ, ಕುವೈತ್ ಬುಬಿಯಾನ್ ದ್ವೀಪದ ಅಮೆರಿಕ ಮಿಲಿಟರಿ ನೆಲೆ, ನೈಋತ್ಯ ಇರಾನ್ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಯುದ್ಧದಲ್ಲಿ ಬೋರುಜ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು, ನೋವುಗಳಾದ ಬಗ್ಗೆ ವರದಿ ಆಗಿಲ್ಲ.
ಇಸ್ರೇಲ್ ಸೇನೆಗಳು ದಕ್ಷಿಣ ಲೆಬನಾನಿನ ಹೆಜ್ಬುಲ್ಲಾ ಮೇಲೆ ದಾಳಿ ಮುಂದುವರಿಸಿದ್ದು ಅಲ್ಲಿನ ಆರು ಜನರ ಕುಟುಂಬ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಇರಾನ್ ಸರ್ಕಾರವು ಅಮೆರಿಕದ ದಾಳಿಗಳನ್ನು ನಾಗರಿಕರನ್ನು ಭಯಗೊಳಿಸಲು ಉದ್ದೇಶಪೂರ್ವಕ ಪ್ರಚೋದನೆ ಮತ್ತು ಯುದ್ಧ ಅಪರಾಧವೆಂದು ಆರೋಪಿಸಿದೆ.
IRGC ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸಾವು
ಇದೇ ವೇಳೆ, ಇರಾನ್ ತೀವ್ರಗಾಮಿ ಪಡೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಐಆರ್ಜಿಸಿ ಹೇಳಿಕೊಂಡಿದೆ. ಇಸ್ರೇಲ್ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಐಆರ್ ಜಿಸಿಯೂ ಪೋಸ್ಟ್ ಮಾಡಿದೆ.
ಆದರೆ, ಖಾದೇಮಿ ಹತ್ಯೆ ನಡೆದ ಸ್ಥಳದ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ. ಸೋಮವಾರ ಮುಂಜಾನೆ ಟೆಹ್ರಾನ್ ಹಾಗೂ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಹಲವು ವಾಯುದಾಳಿಗಳು ನಡೆದಿದೆ. ವರದಿಗಳ ಪ್ರಕಾರ, ಈ ದಾಳಿಗಳಲ್ಲಿ 6 ಮಕ್ಕಳು ಸೇರಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ ನಡೆದಿದ್ದ 12 ದಿನಗಳ ಯುದ್ಧದ ವೇಳೆ ಇಸ್ರೇಲ್, ಇರಾನಿನ ಐಆರ್ ಜಿಸಿ ಗುಪ್ತಚರ ಮುಖ್ಯಸ್ಥ ಜನರಲ್ ಮೊಹಮ್ಮದ್ ಕಜೆಮಿ ಅವರನ್ನ ಹತ್ಯೆ ಮಾಡಿತ್ತು. ಆ ಬಳಿಕ ಖಾದೇಮಿ ಗುಪ್ತಚರ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಮಾರು 50 ವರ್ಷಗಳಿಂದ ಐಆರ್ಜಿಸಿನಲ್ಲಿ ತೊಡಗಿಸಿದ್ದ ಖಾದೇಮಿ, ಗುಪ್ತಚರ, ಭದ್ರತಾ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು, ಶತ್ರುಗಳನ್ನು ಎದುರಿಸುವಾಗ ಉತ್ತಮ ಕಾರ್ಯತಂತ್ರ ರೂಪಿಸುತ್ತಿದ್ದರು. ಅವರ ಪ್ರಯತ್ನಗಳು ಮುಂದಿನ ಹಲವು ವರ್ಷಗಳವರೆಗೂ ದೇಶದ ಗುಪ್ತಚರ ಸಂಸ್ಥೆಗೆ ಮಾರ್ಗದರ್ಶಕವಾಗಿರಲಿದೆ ಎಂದು ಹೇಳಿ ಇರಾನ್ ಸೇನೆ ಸಂತಾಪ ಸೂಚಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm