ಬ್ರೇಕಿಂಗ್ ನ್ಯೂಸ್
06-04-26 06:16 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 6: ಅಮೆರಿಕ ಮತ್ತು ಇರಾನ್ ನಡುವಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅಮೆರಿಕ ಇರಾನ್ಗೆ ನೀಡಿದ 10 ದಿನಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ ಕೊನೆಗೊಳ್ಳಲಿದೆ. ಈ ಮಧ್ಯೆ ಟ್ರಂಪ್, “ಜಲಸಂಧಿ ತೆರೆಯಿರಿ, ಇಲ್ಲದಿದ್ದರೆ ಭೀಕರ ಪರಿಣಾಮಕ್ಕೆ ಸಿದ್ಧರಾಗಿ” ಎಂದು ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.
ಆದರೆ ಡೊನಾಲ್ಡ್ ಟ್ರಂಪ್ ಬೆದರಿಕೆಗೆ ಕ್ಯಾರೆನ್ನದ ಇರಾನ್, ಈವರೆಗಿನ ಯುದ್ಧದಿಂದ ಆಗಿರುವ ನಷ್ಟವನ್ನು ತುಂಬಿಕೊಡುವಂತೆ ಷರತ್ತು ವಿಧಿಸುವ ಮೂಲಕ ತಿರುಗೇಟು ನೀಡಿದೆ. ಇದರಿಂದ ಪ್ರದೇಶದಲ್ಲಿ ಇನ್ನೇನು ಅನಾಹುತ ಆಗುತ್ತೋ ಎನ್ನುವ ಆತಂಕ ಎದುರಾಗಿದೆ.
ಇದೇ ವೇಳೆ, ದಕ್ಷಿಣ ಇಸ್ರೇಲ್ನಲ್ಲಿ ಡಿಮೋನಾ ಪೆಟ್ರೋಕೆಮಿಕಲ್ ಸೌಲಭ್ಯ, ಕುವೈತ್ ಬುಬಿಯಾನ್ ದ್ವೀಪದ ಅಮೆರಿಕ ಮಿಲಿಟರಿ ನೆಲೆ, ನೈಋತ್ಯ ಇರಾನ್ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಯುದ್ಧದಲ್ಲಿ ಬೋರುಜ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು, ನೋವುಗಳಾದ ಬಗ್ಗೆ ವರದಿ ಆಗಿಲ್ಲ.
ಇಸ್ರೇಲ್ ಸೇನೆಗಳು ದಕ್ಷಿಣ ಲೆಬನಾನಿನ ಹೆಜ್ಬುಲ್ಲಾ ಮೇಲೆ ದಾಳಿ ಮುಂದುವರಿಸಿದ್ದು ಅಲ್ಲಿನ ಆರು ಜನರ ಕುಟುಂಬ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಇರಾನ್ ಸರ್ಕಾರವು ಅಮೆರಿಕದ ದಾಳಿಗಳನ್ನು ನಾಗರಿಕರನ್ನು ಭಯಗೊಳಿಸಲು ಉದ್ದೇಶಪೂರ್ವಕ ಪ್ರಚೋದನೆ ಮತ್ತು ಯುದ್ಧ ಅಪರಾಧವೆಂದು ಆರೋಪಿಸಿದೆ.
IRGC ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸಾವು
ಇದೇ ವೇಳೆ, ಇರಾನ್ ತೀವ್ರಗಾಮಿ ಪಡೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಐಆರ್ಜಿಸಿ ಹೇಳಿಕೊಂಡಿದೆ. ಇಸ್ರೇಲ್ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಐಆರ್ ಜಿಸಿಯೂ ಪೋಸ್ಟ್ ಮಾಡಿದೆ.
ಆದರೆ, ಖಾದೇಮಿ ಹತ್ಯೆ ನಡೆದ ಸ್ಥಳದ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ. ಸೋಮವಾರ ಮುಂಜಾನೆ ಟೆಹ್ರಾನ್ ಹಾಗೂ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಹಲವು ವಾಯುದಾಳಿಗಳು ನಡೆದಿದೆ. ವರದಿಗಳ ಪ್ರಕಾರ, ಈ ದಾಳಿಗಳಲ್ಲಿ 6 ಮಕ್ಕಳು ಸೇರಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ ನಡೆದಿದ್ದ 12 ದಿನಗಳ ಯುದ್ಧದ ವೇಳೆ ಇಸ್ರೇಲ್, ಇರಾನಿನ ಐಆರ್ ಜಿಸಿ ಗುಪ್ತಚರ ಮುಖ್ಯಸ್ಥ ಜನರಲ್ ಮೊಹಮ್ಮದ್ ಕಜೆಮಿ ಅವರನ್ನ ಹತ್ಯೆ ಮಾಡಿತ್ತು. ಆ ಬಳಿಕ ಖಾದೇಮಿ ಗುಪ್ತಚರ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಮಾರು 50 ವರ್ಷಗಳಿಂದ ಐಆರ್ಜಿಸಿನಲ್ಲಿ ತೊಡಗಿಸಿದ್ದ ಖಾದೇಮಿ, ಗುಪ್ತಚರ, ಭದ್ರತಾ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು, ಶತ್ರುಗಳನ್ನು ಎದುರಿಸುವಾಗ ಉತ್ತಮ ಕಾರ್ಯತಂತ್ರ ರೂಪಿಸುತ್ತಿದ್ದರು. ಅವರ ಪ್ರಯತ್ನಗಳು ಮುಂದಿನ ಹಲವು ವರ್ಷಗಳವರೆಗೂ ದೇಶದ ಗುಪ್ತಚರ ಸಂಸ್ಥೆಗೆ ಮಾರ್ಗದರ್ಶಕವಾಗಿರಲಿದೆ ಎಂದು ಹೇಳಿ ಇರಾನ್ ಸೇನೆ ಸಂತಾಪ ಸೂಚಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm