ಬ್ರೇಕಿಂಗ್ ನ್ಯೂಸ್
07-04-26 11:42 am HK News Staffer ದೇಶ - ವಿದೇಶ
ಟೆಹ್ರಾನ್, ಏ 07: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಲ್ಭಣವಾಗುತ್ತಿರುವ ನಡುವೆ ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಅದರ ಪ್ರಮುಖ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದು, ಈ ಡೆಡ್ ಲೈನ್ ಮುಕ್ತಾಯವಾಗಲು ಇನ್ನೂ ಕೇವಲ ಕೆಲ ಗಂಟೆಗಳಷ್ಟೇ ಬಾಕಿಯಿದೆ. ಈ ಬೆನ್ನಲ್ಲೇ, ಇರಾನ್ ಆಡಳಿತ ಈ ಮೂಲಸೌಕರ್ಯಗಳ ಸುತ್ತಲೂ ಒಟ್ಟುಗೂಡಿ ಮಾನವ ಸರಪಳಿ ನಿರ್ಮಿಸುವ ಮೂಲಕ,ಸಾಂಕೇತಿಕ ಒಗ್ಗಟ್ಟನ್ನು ಪ್ರದರ್ಶಿಸುವಂತೆ ತನ್ನ ದೇಶದ ಯುವ ಸಮುದಾಯಕ್ಕೆ ಕರೆ ನೀಡಿದೆ.
ಟ್ರಂಪ್ ಗಡುವು ಮುಗಿಯಲು ಕೆಲ ಸಮಯವಷ್ಟೇ ಬಾಕಿಯಿರುವಾಗ ದಾಳಿಯ ವಿರುದ್ದ ದೇಶದ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ವಿರೋಧ ವ್ಯಕ್ತಪಡಿಸುವ ನಿಟ್ಟಿನಲ್ಲಿ ಇರಾನ್ನ ಕ್ರೀಡಾ ಮತ್ತು ಯುವಜನ ಸಚಿವಾಲಯವು ಪ್ರಕಟಣೆ ಬಿಡುಗಡೆ ಮಾಡಿದ್ದು "ಕ್ರೀಡಾಪಟುಗಳು, ಕಲಾವಿದರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇರಾನ್ನ ಯುವಕರು ಏ.7ಕ್ಕೆ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಗೆ ಪ್ರಮುಖ ಇಂಧನ ಮೂಲಸೌಕರ್ಯಗಳ ಬಳಿ ಒಟ್ಟುಗೂಡುವಂತೆ ಕೇಳಿಕೊಂಡಿದೆ. ಈ ಮೂಲಕ ಅಮೆರಿಕಾದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವಾಗ ಇರಾನ್ನ ರಾಷ್ಟ್ರೀಯ ಆಸ್ತಿಗಳನ್ನು ರಕ್ಷಿಸಲು ಬೆಂಬಲವನ್ನು ಸಂಗ್ರಹಿಸುವ ಗುರಿಯನ್ನು ಈ ಕ್ರಮಕೈಗೊಳ್ಳಲಾಗಿದೆ" ಎಂದು ಅಧಿಕಾರಿಗಳು ಹೇಳುತ್ತಾರೆ.
ಕೋಮಾದಲ್ಲಿದ್ದಾರಾ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ?
ಇನ್ನು, ದೇಶದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಈವರೆಗೂ ದೇಶದ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಇಲ್ಲ. ಇದು ಅವರು ಆರೋಗ್ಯ ಪರಿಸ್ಥಿತಿಯ ಕುರಿತು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದ್ದು, ಈ ನಡುವೆ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪ್ರಸ್ತುತ ಇರಾನ್ನ ಕೋಮ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಮೆರಿಕ-ಇಸ್ರೇಲಿ ಗುಪ್ತಚರ ಮೂಲಗಳು ತನ್ನ ಗಲ್ಫ್ ಮಿತ್ರರಾಷ್ಟ್ರಗಳೊಂದಿಗೆ ಹಂಚಿಕೊಂಡ ರಾಜತಾಂತ್ರಿಕ ಜ್ಞಾಪಕ ಪತ್ರದ ಒಳಹರಿವುಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ ಮಾಡಿದೆ.
ಈ ವರದಿಯ ಪ್ರಕಾರ, ಫೆ.28 ರಂದು ಇರಾನ್ನ ಹಿಂದಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಯಾದ ಅದೇ ವೈಮಾನಿಕ ದಾಳಿಯಲ್ಲಿ ಖಮೇನಿ ಗಂಭೀರ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಪ್ರಜ್ಞಾಹೀನಸ್ಥಿತಿಯಲ್ಲಿ ಅಥವಾ ಕೋಮಾದಲ್ಲಿ ಇದ್ದು, ಕೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಪರಿಣಾಮವಾಗಿ ದೇಶವನ್ನು ಮುನ್ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am