ಬ್ರೇಕಿಂಗ್ ನ್ಯೂಸ್
07-04-26 11:42 am HK News Staffer ದೇಶ - ವಿದೇಶ
ಟೆಹ್ರಾನ್, ಏ 07: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಲ್ಭಣವಾಗುತ್ತಿರುವ ನಡುವೆ ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಅದರ ಪ್ರಮುಖ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದು, ಈ ಡೆಡ್ ಲೈನ್ ಮುಕ್ತಾಯವಾಗಲು ಇನ್ನೂ ಕೇವಲ ಕೆಲ ಗಂಟೆಗಳಷ್ಟೇ ಬಾಕಿಯಿದೆ. ಈ ಬೆನ್ನಲ್ಲೇ, ಇರಾನ್ ಆಡಳಿತ ಈ ಮೂಲಸೌಕರ್ಯಗಳ ಸುತ್ತಲೂ ಒಟ್ಟುಗೂಡಿ ಮಾನವ ಸರಪಳಿ ನಿರ್ಮಿಸುವ ಮೂಲಕ,ಸಾಂಕೇತಿಕ ಒಗ್ಗಟ್ಟನ್ನು ಪ್ರದರ್ಶಿಸುವಂತೆ ತನ್ನ ದೇಶದ ಯುವ ಸಮುದಾಯಕ್ಕೆ ಕರೆ ನೀಡಿದೆ.
ಟ್ರಂಪ್ ಗಡುವು ಮುಗಿಯಲು ಕೆಲ ಸಮಯವಷ್ಟೇ ಬಾಕಿಯಿರುವಾಗ ದಾಳಿಯ ವಿರುದ್ದ ದೇಶದ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ವಿರೋಧ ವ್ಯಕ್ತಪಡಿಸುವ ನಿಟ್ಟಿನಲ್ಲಿ ಇರಾನ್ನ ಕ್ರೀಡಾ ಮತ್ತು ಯುವಜನ ಸಚಿವಾಲಯವು ಪ್ರಕಟಣೆ ಬಿಡುಗಡೆ ಮಾಡಿದ್ದು "ಕ್ರೀಡಾಪಟುಗಳು, ಕಲಾವಿದರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇರಾನ್ನ ಯುವಕರು ಏ.7ಕ್ಕೆ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಗೆ ಪ್ರಮುಖ ಇಂಧನ ಮೂಲಸೌಕರ್ಯಗಳ ಬಳಿ ಒಟ್ಟುಗೂಡುವಂತೆ ಕೇಳಿಕೊಂಡಿದೆ. ಈ ಮೂಲಕ ಅಮೆರಿಕಾದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವಾಗ ಇರಾನ್ನ ರಾಷ್ಟ್ರೀಯ ಆಸ್ತಿಗಳನ್ನು ರಕ್ಷಿಸಲು ಬೆಂಬಲವನ್ನು ಸಂಗ್ರಹಿಸುವ ಗುರಿಯನ್ನು ಈ ಕ್ರಮಕೈಗೊಳ್ಳಲಾಗಿದೆ" ಎಂದು ಅಧಿಕಾರಿಗಳು ಹೇಳುತ್ತಾರೆ.
ಕೋಮಾದಲ್ಲಿದ್ದಾರಾ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ?
ಇನ್ನು, ದೇಶದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಈವರೆಗೂ ದೇಶದ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಇಲ್ಲ. ಇದು ಅವರು ಆರೋಗ್ಯ ಪರಿಸ್ಥಿತಿಯ ಕುರಿತು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದ್ದು, ಈ ನಡುವೆ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪ್ರಸ್ತುತ ಇರಾನ್ನ ಕೋಮ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಮೆರಿಕ-ಇಸ್ರೇಲಿ ಗುಪ್ತಚರ ಮೂಲಗಳು ತನ್ನ ಗಲ್ಫ್ ಮಿತ್ರರಾಷ್ಟ್ರಗಳೊಂದಿಗೆ ಹಂಚಿಕೊಂಡ ರಾಜತಾಂತ್ರಿಕ ಜ್ಞಾಪಕ ಪತ್ರದ ಒಳಹರಿವುಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ ಮಾಡಿದೆ.
ಈ ವರದಿಯ ಪ್ರಕಾರ, ಫೆ.28 ರಂದು ಇರಾನ್ನ ಹಿಂದಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಯಾದ ಅದೇ ವೈಮಾನಿಕ ದಾಳಿಯಲ್ಲಿ ಖಮೇನಿ ಗಂಭೀರ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಪ್ರಜ್ಞಾಹೀನಸ್ಥಿತಿಯಲ್ಲಿ ಅಥವಾ ಕೋಮಾದಲ್ಲಿ ಇದ್ದು, ಕೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಪರಿಣಾಮವಾಗಿ ದೇಶವನ್ನು ಮುನ್ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm