ಬ್ರೇಕಿಂಗ್ ನ್ಯೂಸ್
07-04-26 11:45 am HK News Staffer ದೇಶ - ವಿದೇಶ
ಟೆಹ್ರಾನ್, ಏ 07: ಇರಾನ್ ಅಮೆರಿಕ ಯುದ್ಧದ ಮಧ್ಯೆ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಬಿಗ್ ಅಪ್ಡೇಟ್ ಬಂದಿದೆ. ಬ್ರಿಟಿಷ್ ಪತ್ರಿಕೆ 'ದಿ ಟೈಮ್ಸ್ ' ಪ್ರಕಾರ, ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ ದೇಶವನ್ನು ನಡೆಸಲು ಅಸಮರ್ಥವಾಗಿದ್ದಾರೆ ಎಂದು ತಿಳಿದುಬಂದಿದೆ. ಮೊಜ್ತಾಬಾ ಖಮೇನಿ ಪ್ರಸ್ತುತ ಪ್ರಜ್ಞಾಹೀನರಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಮೊಜ್ತಬಾ ಖಮೇನಿ ಸದ್ಯ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಥವಾ ಆಡಳಿತ ನಡೆಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ವರದಿ ಹೇಳುತ್ತದೆ. ಅವರಿಗೆ ಯುದ್ಧದ ಸುದ್ದಿಯಿಲ್ಲ, ಕದನ ವಿರಾಮದ ಅರಿವಿಲ್ಲ ಎಂದು ತಿಳಿದುಬಂದಿದೆ.
ಈ ಮಾಹಿತಿ ಒಂದು ರಾಜತಾಂತ್ರಿಕ ಜ್ಞಾಪಕ ಪತ್ರದಲ್ಲಿ (ಡಿಪ್ಲೊಮ್ಯಾಟಿಕ್ ಮೆಮೊ) ಇದೆ. ಈ ಜ್ಞಾಪಕ ಪತ್ರ ಅಮೆರಿಕ ಮತ್ತು ಇಸ್ರೇಲಿ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿದೆ. ಇದನ್ನು ಗಲ್ಫ್ ರಾಷ್ಟ್ರಗಳಲ್ಲಿನ ಮಿತ್ರ ದೇಶಗಳೊಂದಿಗೆ ಹಂಚಿಕೊಳ್ಳಲಾಗಿದೆ. ಪತ್ರಿಕೆಯ ಪ್ರಕಾರ, ಮೊಜ್ತಬಾ ಖಮೇನಿಗೆ ಟೆಹ್ರಾನ್ನಿಂದ ಸುಮಾರು 140 ಕಿಲೋಮೀಟರ್ ದಕ್ಷಿಣಕ್ಕಿರುವ ಪವಿತ್ರ ನಗರ ಕೋಮ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದಿನ ವರದಿಗಳಲ್ಲಿ ಮೊಜ್ತಬಾ ರಷ್ಯಾಕ್ಕೆ ಕರೆದೊಯ್ಯಲ್ಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ ರಷ್ಯಾದ ರಾಯಭಾರಿ, ಅವರು ಇರಾನ್ನಲ್ಲೇ ಉಳಿದಿದ್ದಾರೆ ಎಂದು ತಿಳಿಸಿದ್ದರು. ಈಗ ದಿ ಟೈಮ್ಸ್ ಈ ಮಾಹಿತಿಯನ್ನು ದೃಢಪಡಿಸಿದೆ.
ಈಗಿನ ಖಮೇನಿ ಆರೋಗ್ಯದ ಸ್ಥಿತಿ ಏನು?
ದಿ ಟೈಮ್ಸ್ ವರದಿ ಪ್ರಕಾರ, ಮೊಜ್ತಬಾ ಖಮೇನಿ ಪ್ರಜ್ಞಾಹೀನರಾಗಿದ್ದು, ಗಂಭೀರ ಚಿಕಿತ್ಸೆಯಲ್ಲಿದ್ದಾರೆ. ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಅಥವಾ ಸೈನ್ಯ ಕಾರ್ಯಾಚರಣೆಗಳಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲ. ಹಾರ್ಮುಜ್ ಜಲಸಂಧಿ ಮತ್ತು ಯುದ್ಧ ವಿರಾಮದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನಂತರ ಬಂದ ಅವರ ‘ಅಂತಿಮ’ ಸಂದೇಶವೂ ಅವರದ್ದಲ್ಲ ಎಂದು ಈಗ ಶಂಕೆಗಳು ಹುಟ್ಟಿವೆ.
ಟ್ರಂಪ್ ಮೊಜ್ತಬಾ ಕೊಲ್ಲಲ್ಪಟ್ಟಿದ್ದಾರೆ ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಲವು ಬಾರಿ ಹೇಳಿದ್ದರು. ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಈ ಅನುಮಾನಗಳನ್ನು ಹೆಚ್ಚಿಸಿತ್ತು. ಈಗ ದಿ ಟೈಮ್ಸ್ ವರದಿ ಈ ಶಂಕೆಗಳನ್ನು ಇನ್ನಷ್ಟು ಬಲಪಡಿಸಿದೆ. ಇರಾನ್ ಸರ್ಕಾರ ಇದುವರೆಗೂ ಈ ವರದಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಿಂದೆ ಕೆಲವು ಅಧಿಕಾರಿಗಳು ಮೊಜ್ತಬಾ ಅವರ ಗಾಯಗಳು ಸಣ್ಣದಾಗಿದ್ದು ಅವರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದರು. ಆದರೆ ಅವರು ಇನ್ನೂ ಸಾರ್ವಜನಿಕ ಕಣ್ಣಿಗೆ ಕಾಣಿಸಿಕೊಳ್ಳದಿರುವುದು ದೊಡ್ಡ ಪ್ರಶ್ನೆಯಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm